ಮೇಲ್ವರ್ಗ ಮೀಸಲು ದಾವೆ ಸಂವಿಧಾನ ಪೀಠಕ್ಕೆ ಈಗಲೇ ಇಲ್ಲ

By Web DeskFirst Published Mar 12, 2019, 1:30 PM IST
Highlights

ಮೇಲ್ವರ್ಗಗಳಲ್ಲಿರುವ ಬಡವರಿಗೆ ಕೇಂದ್ರ ಸರ್ಕಾರ ನೀಡಿರುವ ಶೇ.10ರಷ್ಟುಮೀಸಲಾತಿಯ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಈ ಹಂತದಲ್ಲಿ ಸಂವಿಧಾನ ಪೀಠಕ್ಕೆ ವರ್ಗಾವಣೆ ಮಾಡಿ ಆದೇಶ ನೀಡುವುದಿಲ್ಲ ಎಂದು ಸುಪ್ರೀಂಕೋರ್ಟ್‌ ತಿಳಿಸಿದೆ. 

ನವದೆಹಲಿ (ಮಾ. 12): ಮೇಲ್ವರ್ಗಗಳಲ್ಲಿರುವ ಬಡವರಿಗೆ ಕೇಂದ್ರ ಸರ್ಕಾರ ನೀಡಿರುವ ಶೇ.10ರಷ್ಟುಮೀಸಲಾತಿಯ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಈ ಹಂತದಲ್ಲಿ ಸಂವಿಧಾನ ಪೀಠಕ್ಕೆ ವರ್ಗಾವಣೆ ಮಾಡಿ ಆದೇಶ ನೀಡುವುದಿಲ್ಲ ಎಂದು ಸುಪ್ರೀಂಕೋರ್ಟ್‌ ತಿಳಿಸಿದೆ. ಅಲ್ಲದೆ, ಮಾರ್ಚ್  28 ರಂದು ಅರ್ಜಿಗಳ ವಿಚಾರಣೆ ನಡೆಸಿ ಅವುಗಳನ್ನು ಸಂವಿಧಾನ ಪೀಠಕ್ಕೆ ವರ್ಗಾಯಿಸುವ ಬಗ್ಗೆ ನಿರ್ಧರಿಸುವುದಾಗಿ ಹೇಳಿದೆ.

4 ದಿನದಲ್ಲಿ 3 ನೇ ಕಾಂಗ್ರೆಸ್‌ ಶಾಸಕ ಪಕ್ಷಕ್ಕೆ ರಾಜೀನಾಮೆ!

ಮೇಲ್ವರ್ಗದ ಬಡವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ನೀಡಿರುವ ಮೀಸಲಾತಿ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳಲ್ಲಿ, ಬಡತನವೊಂದೇ ಹಿಂದುಳಿಯುವಿಕೆಗೆ ಮಾನದಂಡವಲ್ಲ. ಹೀಗಾಗಿ ಕೇಂದ್ರ ಸರ್ಕಾರ ಅಂಗೀಕರಿಸಿರುವ ಸಂವಿಧಾನದ 103ನೇ ತಿದ್ದುಪಡಿಯನ್ನು ರದ್ದುಗೊಳಿಸಬೇಕು ಎಂದು ಕೋರಲಾಗಿದೆ. ಈ ಹಿಂದೆ ಕಾಯ್ದೆ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ್ದ ಸುಪ್ರೀಂಕೋರ್ಟ್‌, ಇದೀಗ ಅರ್ಜಿಯನ್ನು ಸಂವಿಧಾನ ಪೀಠಕ್ಕೆ ವರ್ಗಾಯಿಸುವ ಬಗ್ಗೆ ಈಗಲೇ ನಿರ್ಧಾರ ಕೈಗೊಳ್ಳಲು ನಿರಾಕರಿಸಿದೆ.

click me!