
ನವದೆಹಲಿ (ಮಾ. 12): ಮೇಲ್ವರ್ಗಗಳಲ್ಲಿರುವ ಬಡವರಿಗೆ ಕೇಂದ್ರ ಸರ್ಕಾರ ನೀಡಿರುವ ಶೇ.10ರಷ್ಟುಮೀಸಲಾತಿಯ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಈ ಹಂತದಲ್ಲಿ ಸಂವಿಧಾನ ಪೀಠಕ್ಕೆ ವರ್ಗಾವಣೆ ಮಾಡಿ ಆದೇಶ ನೀಡುವುದಿಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ಅಲ್ಲದೆ, ಮಾರ್ಚ್ 28 ರಂದು ಅರ್ಜಿಗಳ ವಿಚಾರಣೆ ನಡೆಸಿ ಅವುಗಳನ್ನು ಸಂವಿಧಾನ ಪೀಠಕ್ಕೆ ವರ್ಗಾಯಿಸುವ ಬಗ್ಗೆ ನಿರ್ಧರಿಸುವುದಾಗಿ ಹೇಳಿದೆ.
4 ದಿನದಲ್ಲಿ 3 ನೇ ಕಾಂಗ್ರೆಸ್ ಶಾಸಕ ಪಕ್ಷಕ್ಕೆ ರಾಜೀನಾಮೆ!
ಮೇಲ್ವರ್ಗದ ಬಡವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ನೀಡಿರುವ ಮೀಸಲಾತಿ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳಲ್ಲಿ, ಬಡತನವೊಂದೇ ಹಿಂದುಳಿಯುವಿಕೆಗೆ ಮಾನದಂಡವಲ್ಲ. ಹೀಗಾಗಿ ಕೇಂದ್ರ ಸರ್ಕಾರ ಅಂಗೀಕರಿಸಿರುವ ಸಂವಿಧಾನದ 103ನೇ ತಿದ್ದುಪಡಿಯನ್ನು ರದ್ದುಗೊಳಿಸಬೇಕು ಎಂದು ಕೋರಲಾಗಿದೆ. ಈ ಹಿಂದೆ ಕಾಯ್ದೆ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ್ದ ಸುಪ್ರೀಂಕೋರ್ಟ್, ಇದೀಗ ಅರ್ಜಿಯನ್ನು ಸಂವಿಧಾನ ಪೀಠಕ್ಕೆ ವರ್ಗಾಯಿಸುವ ಬಗ್ಗೆ ಈಗಲೇ ನಿರ್ಧಾರ ಕೈಗೊಳ್ಳಲು ನಿರಾಕರಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.