ನಾನು ಪ್ರಧಾನಿ ಅಭ್ಯರ್ಥಿ ಅಲ್ಲ, ಗುಜರಾತ್ ಪ್ರಚಾರಕ್ಕೆ ಹೋಗಲ್ಲ

Published : Nov 29, 2017, 01:47 PM ISTUpdated : Apr 11, 2018, 01:07 PM IST
ನಾನು ಪ್ರಧಾನಿ ಅಭ್ಯರ್ಥಿ ಅಲ್ಲ, ಗುಜರಾತ್ ಪ್ರಚಾರಕ್ಕೆ ಹೋಗಲ್ಲ

ಸಾರಾಂಶ

ಚಂದ್ರಲೋಕಕ್ಕೆ ಹೋಗಿ ಎಂದ್ರೆ ಹೋಗೋಕಾಗುತ್ತಾ?: ಸಿಎಂ ಪ್ರಶ್ನೆ

ಬೆಂಗಳೂರು: ದೇಶದ ಮುಂದಿನ ಪ್ರಧಾನಿ ಅಭ್ಯರ್ಥಿ ಸಿದ್ದರಾಮಯ್ಯ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿರುವ ಕುರಿತು ಸಿದ್ದರಾಮಯ್ಯ ಹಾಸ್ಯದ ಧಾಟಿಯಲ್ಲೇ ಪ್ರತಿಕ್ರಿಯೆ ನೀಡಿದ್ದಾರೆ.

‘ಜನ ನೂರು ಹೇಳುತ್ತಾರೆ. ಅದನ್ನೆಲ್ಲ ನಂಬೋಕ್ಕಾಗಲ್ಲ. ಯಾರೋ ಚಂದ್ರಲೋಕಕ್ಕೆ ಹೋಗಿ ಎನ್ನುತ್ತಾರೆ, ಹೋಗೋಕಾಗುತ್ತಾ? ಅದೆಲ್ಲ ಗಂಭೀರವಾಗಿ ತಗೊಳ್ಳಲ್ಲ’ ಎಂದು ಹಾಸ್ಯದ ಧಾಟಿಯಲ್ಲಿ ಹೇಳಿದರು.

ಗುಜರಾತ್ ಪ್ರಚಾರಕ್ಕೆ ಹೋಗಲ್ಲ: ‘ಕಾಂಗ್ರೆಸ್ಸಿನಲ್ಲಿ ಅನೇಕ ಸಮರ್ಥ ನಾಯಕರಿದ್ದಾರೆ. ಅವರೆಲ್ಲ ಗುಜರಾತ್ ಪ್ರಚಾರಕ್ಕೆ ಹೋಗುತ್ತಾರೆ. ನಾನು ಕರ್ನಾಟಕಕ್ಕೆ ಸೀಮಿತ ವಾಗಿದ್ದೇನೆ. ಹೀಗಾಗಿ ನಾನು ಗುಜರಾತ್ ಚುನಾವಣಾ ಪ್ರಚಾರಕ್ಕೆ ಹೋಗುವುದಿಲ್ಲ’ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ‘ಗುಜರಾತ್ ಚುನಾವಣಾ ಪ್ರಚಾರಕ್ಕೆ ಹೋಗುವಂತೆ ಹೈಕಮಾಂಡ್‌ನಿಂದ ನನಗೆ ಸೂಚನೆ ಬಂದಿಲ್ಲ. ಸಚಿವ ಡಿ.ಕೆ.ಶಿವಕುಮಾರ್ ಬೇಕಿದ್ದರೆ ಗುಜರಾತ್ ಪ್ರಚಾರಕ್ಕೆ ಹೋಗುತ್ತಾರೆ’ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಾಲೀಕನ ನಿಧನಕ್ಕೆ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದ ಶ್ವಾನ; ವಿಡಿಯೋ ನೋಡಿ ಭಾವುಕರಾದ ಜನರು
ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ