ಅನ್ನಭಾಗ್ಯ ಯೋಜನೆ ಬಗ್ಗೆ ಸರ್ಕಾರದ ನಿರ್ಧಾರವೇನು ?

Published : Aug 18, 2019, 08:44 AM IST
ಅನ್ನಭಾಗ್ಯ ಯೋಜನೆ ಬಗ್ಗೆ ಸರ್ಕಾರದ ನಿರ್ಧಾರವೇನು ?

ಸಾರಾಂಶ

ಅನ್ನಭಾಗ್ಯ ಯೋಜನೆಯಡಿ ನೀಡುವ ಅಕ್ಕಿ ಪ್ರಮಾಣದಲ್ಲಿ ಕಡಿತವಾಗಲಿದೆ ಎನ್ನುವ ಬಗ್ಗೆ ಬಿ ಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. 

ನವದೆಹಲಿ/ಬೆಂಗಳೂರು [ಆ.18]:  ಅನ್ನಭಾಗ್ಯ ಯೋಜನೆಯಡಿ ನೀಡುವ ಅಕ್ಕಿ ಪ್ರಮಾಣದಲ್ಲಿ ಕಡಿತವಾಗಲಿದೆ ಎಂಬುದು ಶುದ್ಧ ಸುಳ್ಳು. ಬಡವರಿಗೆ ನೀಡುವ ಅಕ್ಕಿ ಪ್ರಮಾಣದಲ್ಲಿ ಕಡಿತ ಮಾಡುವ ಯಾವುದೇ ಪ್ರಸ್ತಾವನೆಯೂ ನನ್ನ ಮುಂದಿಲ್ಲ. ಅಕ್ಕಿ ಪ್ರಮಾಣದಲ್ಲಿ ಕಡಿತ ಮಾಡುವುದೂ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಶನಿವಾರ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆ ಮುಂದುವರಿಸಲು ಅನುದಾನ ಬಿಡುಗಡೆ ಕುರಿತ ಕಡತಕ್ಕೆ ನಾನು ಈಗಾಗಲೇ ಸಹಿ ಕೂಡ ಮಾಡಿದ್ದೇನೆ ಎಂದು ತಿಳಿಸಿದರು.

ಬಡವರ ಪರವಾದ ಕಾರ್ಯಕ್ರಮಗಳನ್ನು ಹೆಚ್ಚೆಚ್ಚು ಮಾಡಬೇಕು ಎನ್ನುವ ವ್ಯಕ್ತಿ ನಾನು. ದೀನದಲಿತರ, ಅಲ್ಪಸಂಖ್ಯಾತರ, ಹಿಂದುಳಿದ ವರ್ಗಗಳ ಪರವಾದ ಕಾರ್ಯಕ್ರಮಗಳನ್ನು ಹಿಂದಿನ ಸರ್ಕಾರ ಮಾಡಿದ್ದರೇನು, ಈಗಿನ ಸರ್ಕಾರ ಮಾಡಿದರೇನು? ಬಡವರಿಗೆ ಪ್ರಯೋಜನ ಮಾಡಬೇಕು ಎಂಬ ಸದುದ್ದೇಶ ಎಲ್ಲರಿಗೂ ಇದೆ. ಆದ್ದರಿಂದ ಹಿಂದಿನ ಸರ್ಕಾರದ ಮುಖ್ಯಮಂತ್ರಿಗಳು ಆತಂಕಪಡುವ ಅಗತ್ಯವಿಲ್ಲ. ಇರುವ ಜನಪರ ಕಾರ್ಯಕ್ರಮಗಳನ್ನು ರದ್ದು ಮಾಡುವ ಉದ್ದೇಶವಿಲ್ಲ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

US Wars: ಕಾಲು ಶತಮಾನದಲ್ಲಿ 10 ದೇಶಗಳ ಮೇಲೆ ಅಮೆರಿಕ ದಾಳಿ; 47 ಲಕ್ಷ ಜನರ ಸಾವು, 8 ಲಕ್ಷ ಕೋಟಿ ಡಾಲರ್ ಖರ್ಚು!
Holi 2026: ಅರ್ಧ ಜಗತ್ತೇ ಯುದ್ಧದಲ್ಲಿ ರಕ್ತದೋಕುಳಿ ಆಡುತ್ತಿರುವಾಗ, ಅನಾಥಾಶ್ರಮದ ಮಕ್ಕಳೊಂದಿಗೆ ಭಾರತೀಯ ಸೈನಿಕರ ಸಂಭ್ರಮದ ಬಣ್ಣದಾಟ