
ಇಸ್ಲಮಾಬಾದ್[ಮಾ.04]: ಪಾಕಿಸ್ತಾನ ಸಂಸತ್ತಿನಲ್ಲಿ ಇಮ್ರಾನ್ ಖಾನ್ ಗೆ 'ನೋಬಲ್ ಶಾಂತಿ ಪ್ರಶಸ್ತಿ' ನೀಡಬೇಕೆಂಬ ಪ್ರಸ್ತಾಪ ಕೇಳಿ ಬಂದಿತ್ತು. ಆದರೀಗ ಈ ಬೆಳವಣಿಗೆಯ ಬೆನ್ನಲ್ಲೇ ಪಾಕ್ ಪ್ರಧಾನಿ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.
ನೋಬಲ್ ಶಾಂತಿ ಪ್ರಶಸ್ತಿಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿಡುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ 'ನಾನು ನೋಬಲ್ ಶಾಂತಿ ಪ್ರಶಸ್ತಿ ಸ್ವೀಕರಿಸಲು ಅನರ್ಹ. ಆದರೆ ಕಾಶ್ಮೀರದ ಜನರ ಭರವಸೆಯ ಬೆಳಕಾಗಿ, ಅಲ್ಲಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡು ಶಾಂತಿ ಮತ್ತು ಮಾನವ ಅಭಿವೃದ್ಧಿಗೆ ದಾರಿ ಮಾಡಿಕೊಡುತ್ತಾರೋ ಅವರಿಗೆ ಇದು ಸಲ್ಲಬೇಕು ' ಎಂದಿದ್ದಾರೆ.
ಭಾರತ ಹಾಗೂ ಪಾಕಿಸ್ತಾನದ ನಡುವೆ ಭಾರೀ ಒತ್ತಡದ ವಾತಾವರಣ ನಿರ್ಮಾಣವಾಗಿದೆ. ಹೀಗಿರುವಾಗಲೇ ಭಾರತೀಯ ಪೈಲಟ್ ಅಭಿನಂದನ್ ರನ್ನು ಭಾರತಕ್ಕೆ ಮರಳಿಸಿರುವ ಪಾಕ್ ಸರ್ಕಾರದ ಪ್ರಧಾನಿ ಇಮ್ರಾನ್ ಖಾನ್ ಗೆ ನೋಬಲ್ ಶಾಂತಿ ಪ್ರಶಸ್ತಿ ನೀಡಬೇಕೆಂಬ ಪ್ರಸ್ತಾಪ ಪಾಕ್ ಸಂಸತ್ತಿನಲ್ಲಿ ಸಲ್ಲಿಸಲಾಗಿದೆ. ಇಮ್ರಾನ್ ಖಾನ್ ತೆಗೆದುಕೊಂಡ ನಿರ್ಧಾರದಿಂದ ಭಾರತ ಹಾಗೂ ಪಾಕ್ ನಡುವಿನ ಒತ್ತಡವೂ ಕಡಿಮೆಯಾಗಿದೆ. ಅತ್ಯಂತ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಇಮ್ರಾನ್ ಖಾನ್ ಜವಾಬ್ದಾರಿಯುತ ಹೆಜ್ಜೆ ಇಟ್ಟಿದ್ದಾರೆ ಎಂದೂ ಇಲ್ಲಿ ಉಲ್ಲೇಖಿಸಲಾಗಿದೆ.
ಪಾಕ್ ಸಂಸತ್ತಿನಲ್ಲಿ ಕೆಳಿ ಬಂದ ಈ ಮನವಿಗೆ ಸಾಮಾಜಿಕ ಜಾಲತಾಣಗಳಲ್ಲಿ ಬಹಳಷ್ಟು ಪರ ವಿರೋಧಗಳು ವ್ಯಕ್ತವಾಗಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.