
ಮೈಸೂರು(ಜ.17) ನನ್ನ ಪುತ್ರನ ನಾಮಕರಣ ಇನ್ನೂ ನಿಗದಿಯಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹಾಕಲಾಗಿರುವ ಕೆಲವು ಊಹಪೋಹಗಳಿಗೆ ಕಿವಿಗೊಡಬೇಡಿ ಎಂದು ಮೈಸೂರು ಮಹರಾಜ ಯದುವೀರ್ ಒಡೆಯರ್ ಫೇಸ್'ಬುಕ್'ನಲ್ಲಿ ಬರೆದುಕೊಂಡಿದ್ದಾರೆ.
ನನ್ನ ಪುತ್ರನ ನಾಮಕರಣ ದಿನಾಂಕದ ವರದಿಯನ್ನು ಮಾಧ್ಯಮಗಳು ಹಾಗೂ ಪತ್ರಿಕೆಗಳಲ್ಲಿ ನೋಡಿದ್ದೇವೆ. ಆದರೆ ಇವು ಅರಮನೆಯ ಅಧಿಕೃತ ಮಾಹಿತಿ ಅಲ್ಲ. ವದಂತಿಗಳಿಗೆ ಕಿವಿಗೊಡಬೇಡಿ, ಅರಮನೆಯಿಂದಲೇ ಅಧಿಕೃತ ನೀಡುತ್ತೇವೆ ಎಂದು ಹೇಳಿದ್ದಾರೆ. ನಮ್ಮ ಖಾಸಗಿ ವಿಷಯಗಳಿಗೆ ಮಾಧ್ಯಮದವರ ಸಹಕಾರ ಬೇಕು, ಇಂತಿ ನಿಮ್ಮ ಯದುವೀರ್ ಒಡೆಯರ್ ಎಂದು ತಮ್ಮ ಫೇಸ್'ಬುಕ್ ವಾಲ್'ನಲ್ಲಿ ಬರೆದುಕೊಂಡಿದ್ದಾರೆ.
ಡಿಸೆಂಬರ್ 6ರಂದು ರಿಷಿಕಾ-ಯದುವೀರ್ ದಂಪತಿಗೆ ಗಂಡುಮಗು ಜನಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.