
ನವದೆಹಲಿ (ನ.08): ನೋಟ್ ಬ್ಯಾನ್ ಮಾಡಿ ಇಂದಿಗೆ ಒಂದು ವರ್ಷ ತುಂಬಿದೆ. ಸಾಕಷ್ಟು ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ನೋಟ್'ಬ್ಯಾನ್ ವಿರುದ್ಧ ರಾಹುಲ್ ಗಾಂಧಿ ಟೀಕಾಸ್ತ್ರ ಪ್ರಯೋಗಿಸಿದ್ದಾರೆ. ಪ್ರಧಾನಿ ದೇಶವನ್ನು ಕೊಳ್ಳೆ ಹೊಡೆಯುತ್ತಿದ್ದಾರೆ. ಜನರ ನಿರುದ್ಯೋಗವನ್ನು ಕೋಮುವಾದಗಳಾಗಿ ಪರಿವರ್ತಿಸಿ ದೇಶದ ಆರ್ಥಿಕ ವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಡಿಮಾನಿಟೈಸೇಶನ್ ವಿವೇಚನಾ ರಹಿತವಾದದ್ದು. ಪ್ರಧಾನ ಮಂತ್ರಿಯವರ ಈ ನಿರ್ಧಾರದಿಂದ ಲಕ್ಷಾಂತರ ಜನರ ಜೀವನ ಹಾಳಾಗಿದೆ. ಅರ್ಥವ್ಯವಸ್ಥೆಯ ಮಹಾಕ್ರಾಂತಿ ಎಂದೇ ಬಿಂಬಿಸಲಾಗಿರುವ ಡಿಮಾನಿಟೈಶೇಶನ್ ಮೂಲಕ ಮೋದಿ ದೇಶದ ಅರ್ಥ ವ್ಯವಸ್ಥೆಯನ್ನು ಕೊಳ್ಳೆ ಹೊಡೆಯುತ್ತಿದ್ದಾರೆ.
ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ತೊಲಗಿಸುವುದೇ ಡಿಮಾನಿಟೈಸೇಶನ್ ಉದ್ದೇಶ ಎಂದು ಮೋದಿ ಹೇಳಿದ್ದರು. ಆದರೆ ಅವರು ನಾವಿಟ್ಟಿರುವ ಭರವಸೆಯನ್ನೇ ಹೋಗಲಾಡಿಸಿದ್ದಾರೆ. ಇದು ಒಂದು ಕೆಟ್ಟ ನಿರ್ಧಾರ. ನಾವು ಜನರ ಪರವಾಗಿ ನಿಂತಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.