
ನವದೆಹಲಿ (ಮಾ.24): ಫೇಸ್ಬುಕ್ ಬಳಕೆದಾರರ ವೈಯಕ್ತಿಕ ಮಾಹಿತಿ ಸೋರಿಕೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂಬ್ರಿಜ್ ಅನಾಲಿಟಿಕಾ ಕಂಪನಿಗೆ ಕೇಂದ್ರ ಸರ್ಕಾರ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.
ಭಾರತದ ಬಳಕೆದಾರರ ದತ್ತಾಂಶಗಳನ್ನು ಬಳಕೆಮಾಡಿಕೊಂಡ ಆರೋಪ ಎದುರಿಸುತ್ತಿರುವ ಸಂಸ್ಥೆಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದೆ. ಈ ಸಂಬಂಧ ಆರು ನಿರ್ದಿಷ್ಟಪ್ರಶ್ನೆಗಳಿಗೆ ಮಾ.31ರ ಒಳಗಾಗಿ ಉತ್ತರಿಸುವಂತೆ ಸರ್ಕಾರ ತಿಳಿಸಿದೆ. ಒಂದು ವೇಳೆ ಸೂಕ್ತ ಉತ್ತರ ನೀಡದೇ ಇದ್ದರೆ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯದಿಂದ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.