
ಬೆಂಗಳೂರು : ನಲಪಾಡ್ ಹ್ಯಾರಿಸ್ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಯ ಆಸ್ಪತ್ರೆ ವೈದ್ಯ ಡಾ. ಆನಂದ್ ಸಿಂಗ್’ಗೆ ಸಿಸಿಬಿ ನೋಟಿಸ್ ನೀಡಿದೆ. ಈ ಪ್ರಕರಣದ ಬಗ್ಗೆ ಮಾಧ್ಯಮಗಳಿಗೆ ಮಾಹಿತಿಯನ್ನು ಬಹಿರಂಗ ಮಾಡಿದ ಹಿನ್ನೆಲೆಯಲ್ಲಿ ನೋಟಿಸ್ ಜಾರಿಯಾಗಿದೆ.
ವಿದ್ವತ್’ಗೆ ಚಿಕಿತ್ಸೆ ನೀಡಿದ ಬಳಿಕ ಡಿಶ್ಚಾರ್ಜ್ ಮಾಡಲಾಗಿದ್ದು, ಇದರ ಸಮ್ಮರಿಯನ್ನು ಸಿಸಿಬಿಗೆ ನೀಡುವ ಮುನ್ನವೇ ಮಾಧ್ಯಮಗಳಿಗೆ ನೀಡಿದ್ದಾರೆ. ವಿದ್ವತ್ ಆರೋಗ್ಯದ ಬಗೆಗಿನ ಮಾಹಿತಿಯನ್ನು ಮಾಧ್ಯಮಕ್ಕೆ ಬಹಿರಂಗ ಮಾಡಿದ್ದೀರಿ ಎಂದು ನೋಟಿಸ್ ಜಾರಿಯಾಗಿದೆ.
ಅಲ್ಲದೇ ಈ ಪ್ರಕರಣದ ವಿಚಾರಣೆ ವೇಳೆ ಕೋರ್ಟ್’ನಲ್ಲಿಯೂ ಕೂಡ ಡಾ. ಆನಂದ್ ಹೆಸರು ಪ್ರಸ್ತಾಪ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿಸಿಬಿ ನೋಟಿಸ್ ಜಾರಿ ಮಾಡಿದ್ದು, ಅವರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಗಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.