
ಲಖನೌ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಟಾಂಗ್ ನೀಡಲು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೊಸ ತಂತ್ರ ಹೂಡಿದ್ದಾರೆ.
ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, ಉತ್ತರ ಪ್ರದೇಶದಲ್ಲಿ, ಕಾಂಬೋಡಿಯಾದ ಆ್ಯಂಕೋರ್ ವ್ಯಾಟ್ ಮಾದರಿಯ ಭವ್ಯ ದೇವಸ್ಥಾನವುಳ್ಳ ವಿಷ್ಣು ದೇವರ ಹೆಸರಿನ ವೈಭವಯುತ ನಗರವನ್ನು ಅಭಿವೃದ್ಧಿ ಪಡಿಸುವುದಾಗಿ ಅಖಿಲೇಶ್ ಘೋಷಿಸಿದ್ದಾರೆ.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕಾನೂನು ರೂಪಿಸುವ ಬಗ್ಗೆ ಉತ್ತರ ಪ್ರದೇಶ ಡಿಸಿಎಂ, ಬಿಜೆಪಿ ನಾಯಕ ಕೇಶವ್ ಪ್ರಸಾದ್ ಮೌರ್ಯ ಹೇಳಿದ ಬೆನ್ನಲ್ಲೇ ಅಖಿಲೇಶ್ ಹೇಳಿಕೆ ಹೊರಬಿದ್ದಿರುವುದು ಪ್ರಾಮುಖ್ಯತೆಯನ್ನು ಪಡೆದಿದೆ. ಇಟಾವಾದ ಸಿಂಹ ಸಫಾರಿ ಬಳಿ 2,000 ಎಕರೆ ಭೂಮಿಯಿದ್ದು, ಅಲ್ಲಿ ಶ್ರೀವಿಷ್ಣುವಿನ ಹೆಸರಿನ ನಗರ ನಿರ್ಮಿಸುವುದಾಗಿ ಅವರು ಘೋಷಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.