
ನವದೆಹಲಿ (ಮಾ.21): ಕೇಂದ್ರ ಬಜೆಟ್ ನಲ್ಲಿ ಘೋಷಿಸಿದಂತೆ 3 ಲಕ್ಷ ರೂ. ನಗದು ವ್ಯವಹಾರ ಮಿತಿಯನ್ನು 2 ಲಕ್ಷಕ್ಕೆ ಇಳಿಸಲು ಸರ್ಕಾರ ಚಿಂತನೆ ನಡೆಸಿದೆ. 2 ಲಕ್ಷಕ್ಕಿಂತ ಜಾಸ್ತಿ ನಗದು ವ್ಯವಹಾರ ನಡೆಸಿದರೆ ಅದನ್ನು ಕಾನೂನುಬಾಹಿರ ಎಂದು ಪರಿಗಣಿಸಲಾಗುತ್ತದೆ ಹಾಗೂ ದಂಡ ವಿಧಿಸಲಾಗುತ್ತದೆ ಎಂದು ಕೇಂದ್ರೀಯ ಆದಾಯ ಕಾರ್ಯದರ್ಶಿ ಹಸ್ಮುಖ್ ಆದಿಯಾ ಹೇಳಿದ್ದಾರೆ.
ಕಪ್ಪುಹಣದ ಬಗ್ಗೆ ವಿಶೇಷ ತನಿಖಾ ತಂಡದ ಶಿಫಾರಸ್ಸಿನ ಮೇರೆಗೆ 3 ಲಕ್ಷಕ್ಕಿಂತ ಜಾಸ್ತಿ ನಗದು ವ್ಯವಹಾರಕ್ಕೆ ಸರ್ಕಾರ ಅವಕಾಶ ನೀಡದಿರಲು ನಿರ್ಧರಿಸಿದೆ ಎಂದು ಅರುಣ್ ಜೇಟ್ಲಿ ಬಜೆಟ್ ನಲ್ಲಿ ಘೋಷಿಸಿದ್ದರು. ಇದೀಗ ಆದಾಯ ಕಾಯ್ದೆ ತಿದ್ದುಪಡಿ ತಂದು 3 ಲಕ್ಷದಿಂದ 2 ಲಕ್ಷ ಮಿತಿಗೆ ಇಳಿಸಲು ಸರ್ಕಾರ ನಿರ್ಧರಿಸಿದೆ.ಇದು ಮುಂದಿನ ತಿಂಗಳಿಂದ ಜಾರಿಯಾಗಲಿದೆ.
2 ಲಕ್ಷಕ್ಕಿಂತ ಜಾಸ್ತಿ ನಗದು ವ್ಯವಹಾರ ನಡೆಸಿದರೆ ಶೇ.100 ರಷ್ಟು ದಂಡ ವಿಧಿಸಲಾಗುತ್ತದೆ.
ಕಪ್ಪುಹಣವನ್ನು ತಡೆಗಟ್ಟುವುದು ಮತ್ತು ದೇಶದಲ್ಲಿ ಡಿಜಿಟಲ್ ವ್ಯವಹಾರವನ್ನು ಉತ್ತೇಜಿಸುವುದು ಇದರ ಉದ್ದೇಶವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.