ಸರ್ಕಾರದಿಂದ ಮತ್ತೊಂದು ಹೊಸ ಆದೇಶ

Published : Sep 08, 2018, 09:46 AM ISTUpdated : Sep 09, 2018, 08:53 PM IST
ಸರ್ಕಾರದಿಂದ ಮತ್ತೊಂದು ಹೊಸ ಆದೇಶ

ಸಾರಾಂಶ

ಇದೀಗ ಕರ್ನಾಟಕ ಸರ್ಕಾರ ಮತ್ತೊಂದು ಹೊಸ ಆದೇಶವನ್ನು ಹೊರಡಿಸಿದೆ. ಇನ್ನು ಮುಂದೆ ಸರ್ಕಾರ ಕಚೇರಿಗಳಲ್ಲಿ ಪ್ಲಾಸ್ಟಿಕ್ ತಟ್ಟೆ ಲೋಟಗಳನ್ನು ನಿಷೇಧ ಮಾಡಬೇಕು ಎಂದು ಆದೇಶ ನೀಡಿದೆ. 

ಬೆಂಗಳೂರು :  ವಿಧಾನಸಭೆ ಹಾಗೂ ವಿಕಾಸಸೌಧದ ಕಚೇರಿಗಳಲ್ಲಿ ನಡೆಯುವ ಸಭೆಗಳಲ್ಲಿ ಪ್ಲಾಸ್ಟಿಕ್‌ ಬಾಟಲ್‌ಗಳ ಬದಲಿಗೆ ಸ್ಟೀಲ್‌ ಲೋಟ ಬಳಸುವಂತೆ ಆದೇಶ ಹೊರಡಿಸಿದ ಬೆನ್ನಲ್ಲೇ ರಾಜ್ಯಾದ್ಯಂತ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಕಚೇರಿಗಳಲ್ಲಿ ಪ್ಲಾಸ್ಟಿಕ್‌ ತಟ್ಟೆ, ಬಾಟಲ್‌ ಹಾಗೂ ಲೋಟ ಬಳಕೆ ಮಾಡದಂತೆ ಸರ್ಕಾರ ಆದೇಶ ಹೊರಡಿಸಿದೆ.

ಕಳೆದ ತಿಂಗಳು ಆದೇಶ ಹೊರಡಿಸಿದ್ದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ವಿಧಾನಸೌಧದ ಕಚೇರಿಗಳಲ್ಲಿ ನಡೆಸುವ ಸಭೆಗಳಲ್ಲಿ ಪ್ಲಾಸ್ಟಿಕ್‌ ಲೋಟ, ಬಾಟಲ್‌ ಬಳಸಬಾರದು. ಪ್ಲಾಸ್ಟಿಕ್‌ ನಿಷೇಧದ ಬಗ್ಗೆ ಮಾದರಿಯಾಗುವ ನಿಟ್ಟಿನಲ್ಲಿ ಸ್ಟೀಲ್‌ ತಟ್ಟೆಹಾಗೂ ಸ್ಟೀಲ್‌ ಲೋಟವನ್ನೇ ಬಳಕೆ ಮಾಡಬೇಕು ಎಂದು ಆದೇಶ ಹೊರಡಿಸಿತ್ತು. ಈ ಆದೇಶ ಸಂಪೂರ್ಣ ಅನುಷ್ಠಾನಗೊಳ್ಳುವ ಮೊದಲೇ ಇದೀಗ ಸರ್ಕಾರದ ಅಧೀನ ಕಾರ್ಯದರ್ಶಿಗಳು ಮತ್ತೊಂದು ಆದೇಶ ಹೊರಡಿಸಿ ರಾಜ್ಯಾದ್ಯಂತ ಇದೇ ನಿಯಮ ಜಾರಿಗೆ ಸೂಚಿಸಿದ್ದಾರೆ.

ಸೆ.5 ರಂದು ಹೊರಡಿಸಿರುವ ಆದೇಶದ ಪ್ರಕಾರ ಇನ್ನು ಮುಂದೆ ಸರ್ಕಾರಿ, ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ ಮತ್ತು ವಿಶ್ವವಿದ್ಯಾಲಯಗಳಲ್ಲಿ ನಡೆಯುವ ಸರ್ಕಾರದ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್‌ ಬಳಕೆ ಮಾಡುವಂತಿಲ್ಲ. ಒಂದು ವೇಳೆ ಪ್ಲಾಸ್ಟಿಕ್‌ ಬಾಟಲ್‌ ಬಳಕೆ ಮಾಡಿದರೂ ಪುನರ್‌ ಬಳಕೆಗೆ ಯೋಗ್ಯವಾಗಿರುವಂತಹ ಬಾಟಲ್‌ ಬಳಸಬೇಕು. ಒಮ್ಮೆ ಮಾತ್ರ ಬಳಸಿ ಬಿಸಾಡುವ ಬಾಟಲ್‌, ತಟ್ಟೆ, ಲೋಟ ಹಾಗೂ ಕವರ್‌ಗಳು ಸೇರಿದಂತೆ ಯಾವುದೇ ಪ್ಲಾಸ್ಟಿಕ್‌ ಉತ್ಪನ್ನ ಬಳಕೆ ಮಾಡಬಾರದು.

ಸರ್ಕಾರದ ಕಚೇರಿಗಳಲ್ಲಿ ನಡೆಯುವ ಸಭೆ, ಸಮಾರಂಭಗಳಲ್ಲಿ ಒಂದು ಬಾರಿ ಬಳಸಿ ಬಿಸಾಡುವ ಪ್ಲಾಸ್ಟಿಕ್‌ ಬಾಟಲ್‌ಗಳಿಂದ ಪ್ಲಾಸ್ಟಿಕ್‌ ಬಳಕೆ ಹೆಚ್ಚಾಗುತ್ತಿದೆ. ಈ ಪ್ಲಾಸ್ಟಿಕ್‌ ಬಾಟಲ್‌ ಎಲ್ಲೆಂದರಲ್ಲಿ ಎಸೆದು ಪರಿಸರಕ್ಕೆ ಹಾನಿಯಾಗುತ್ತಿದೆ. ಬಹುತೇಕ ಬಾಟಲ್‌ಗಳಲ್ಲಿ ಪೂರ್ಣ ಪ್ರಮಾಣದಲ್ಲಿ ನೀರು ಬಳಕೆ ಮಾಡದೆ ಉಳಿದಿರುತ್ತದೆ. ಇದರಿಂದ ನೀರು ಸಹ ವ್ಯರ್ಥವಾಗುತ್ತಿದೆ. ಹೀಗಾಗಿ ಪ್ಲಾಸ್ಟಿಕ್‌ ಬಳಕೆ ಮಾಡಬಾರದು ಎಂದು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಪರವಾಗಿ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಎಸ್‌. ರೋಹಿಣಿ ಅವರು ಆದೇಶ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಶ್ಲೀಲ ಕಂಟೆಂಟ್: ಎಕ್ಸ್‌ಗೆ ಕೇಂದ್ರದಿಂದ ನೋಟಿಸ್, 72 ಗಂಟೆಯೊಳಗೆ ಉತ್ತರಿಸಲು ಸೂಚನೆ
ಚುನಾವಣೆಗೂ ಮುನ್ನವೇ ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಅಬ್ಬರ! ಮತದಾನಕ್ಕೆ ಮೊದಲೇ 66 ಸ್ಥಾನಗಳು ಮೈತ್ರಿ ಪಾಲಿಗೆ!