
ಗುವಾಹಟಿ[ಆ.29]: ಅಕ್ರಮ ವಲಸಿಗರನ್ನು ಹೊರಹಾಕಲು ಅಸ್ಸಾಂನಲ್ಲಿ ರೂಪಿಸುತ್ತಿರುವ ರಾಷ್ಟ್ರೀಯ ಪೌರತ್ವ ನೋಂದಣಿಯ ಅಂತಿಮ ಪಟ್ಟಿ ಪ್ರಕಟಕ್ಕೆ ಕೇವಲ 3 ದಿನ ಮಾತ್ರ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ, ದೋಷ ರಹಿತ ಪಟ್ಟಿತಯಾರಿಕೆಗಾಗಿ ಸಾವಿರಾರು ಸರ್ಕಾರಿ ನೌಕರರು ಅಹೋರಾತ್ರಿ ಕಾರ್ಯನಿರ್ವಹಿಸುತ್ತಿದ್ದಾರೆ.
ಜಿಲ್ಲಾ , ಸರ್ಕಲ್ ಹಾಗೂ ಬ್ಲಾಕ್ ಮಟ್ಟದಲ್ಲಿ ಮಾಹಿತಿ ಸಂಗ್ರಹ ಪೂರ್ಣವಾಗಿದ್ದು, ಯಾವುದೇ ಅರ್ಹ ನಾಗರಿಕ ಹೆಸರು ಬಿಟ್ಟುಹೋಗದಂತೆ ಅಧಿಕಾರಿಗಳು ಎಚ್ಚರ ವಹಿಸಿ ಕೆಲಸ ಮಾಡುತ್ತಿದ್ದಾರೆ. ಗುಣಮಟ್ಟನಿಯಂತ್ರಣ ಪರಿಶೀಲನೆ ನಡೆಯುತ್ತಿದ್ದು, ದೋಷ ರಹಿತ ಪಟ್ಟಿಗಾಗಿ ಆ.31ರ ಅಂತಿಮ ದಿನದವರೆಗೂ ಇದು ಮುಂದುವರಿಯಲಿದೆ.
ಮಾಹಿತಿ ಸಂಗ್ರಹ ಮಾಡುವ ಅಧಿಕಾರಿಗಳು ಹಲವು ಇಲಾಖೆ, ಗಡಿ ಪೊಲೀಸ್ ವಿಭಾಗ ಹಾಗೂ ವಿದೇಶಿ ನ್ಯಾಯಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ನ್ಯಾಯಾಲಯದಲ್ಲಿ ಮೊಕದ್ದಮೆ ಇರುವವರನ್ನು ಎನ್ಆರ್ಸಿ ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.