ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಲಾಭವೋ - ನಷ್ಟವೋ..?

Published : Aug 04, 2018, 08:05 AM IST
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ  ಲಾಭವೋ - ನಷ್ಟವೋ..?

ಸಾರಾಂಶ

ಅಕ್ರಮ ಬಾಂಗ್ಲಾ ವಲಸಿಗರ ವಿಚಾರವನ್ನು ಲೋಕಸಭಾ ಚುನಾವಣೆಯಲ್ಲಿ ಮುಖ್ಯ ವಿಷಯವಾಗಿ ಪ್ರಸ್ತಾಪಿಸಿ ಲಾಭ ಗಿಟ್ಟಿಸಲು  ಬಿಜೆಪಿ  ಪ್ರಯತ್ನ ನಡೆಸಲಿದ್ದು, ಇದಕ್ಕೆ ಯಾವ ರೀತಿ ತಿರುಗೇಟು ನೀಡಬೇಕು ಎಂಬ ಬಗ್ಗೆ ಕಾಂಗ್ರೆಸ್ ಕೂಡ  ಚಿಂತಿಸಿದೆ. 

ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರ ವಿಚಾರವನ್ನು ಲೋಕಸಭಾ ಚುನಾವಣೆಯಲ್ಲಿ ಮುಖ್ಯ ವಿಷಯವಾಗಿ ಪ್ರಸ್ತಾಪಿಸಿ ಲಾಭ ಗಿಟ್ಟಿಸಲು  ಬಿಜೆಪಿ  ಪ್ರಯತ್ನ ನಡೆಸಲಿದ್ದು, ಇದಕ್ಕೆ ಯಾವ ರೀತಿ ತಿರುಗೇಟು ನೀಡಬೇಕು ಎಂಬ ಬಗ್ಗೆ ಕಾಂಗ್ರೆಸ್ ತೀವ್ರ ಚಿಂತನೆ ನಡೆಸಿದೆ.

ಬಿಜೆಪಿಯು ಈ ವಿಚಾರವನ್ನು ರಾಷ್ಟ್ರೀಯ ಮಟ್ಟದಲ್ಲಿ ಪ್ರಸ್ತಾಪಿಸಲಿದ್ದು, ಇದನ್ನು ಚುನಾವಣೆಯಲ್ಲಿ ಭಾವಾನಾತ್ಮಕ ವಿಷಯ ಮಾಡಿ  ‘ಭಾರತೀಯರು ವರ್ಸರ್ಸ್ ಬಾಂಗ್ಲಾದೇಶೀಯರು’ ಎಂಬಂತೆ ಈ ವಿಚಾರವನ್ನು ಬೆಳೆಸಿ ಲಾಭ ಮಾಡಿಕೊಳ್ಳಲು ಹವಣಿಸಲಿದೆ. ಹೀಗಾಗಿ ರಾಜ್ಯದಲ್ಲೂ ಈ ವಿಚಾರ ಪ್ರಸ್ತಾಪವಾಗಲಿದೆ. ರಾಜ್ಯದಲ್ಲೂ ಬಾಂಗ್ಲಾದೇಶೀಯರಿದ್ದು, ಅದರ ಲಾಭವನ್ನು ಬಿಜೆಪಿ ಗಿಟ್ಟಿಸಲು ಯತ್ನಿಸಲಿದೆ. 

ಇದನ್ನು ಹೇಗೆ ತಡೆಯುವುದು ಮತ್ತು ಇದಕ್ಕೆ ಪ್ರತಿತಂತ್ರವನ್ನು ರೂಪಿಸಬೇಕು ಎಂದು ಶುಕ್ರವಾರ ನಡೆದ ಸಭೆಯಲ್ಲಿ ಚರ್ಚಿಸಲಾಯಿತು. ಆದರೆ, ಏನು ಮಾಡಬೇಕು ಎಂಬ ಬಗ್ಗೆ ಇನ್ನೂ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಮೂಲಗಳು ತಿಳಿಸಿವೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!
ಪೊಲೀಸ್‌ ಚೆಕಿಂಗ್‌ ವೇಳೆ ಹೋಟೆಲ್‌ ಬಾಲ್ಕನಿಯಿಂದ ಹಾರಿದ ಬೆಂಗಳೂರು ಮಹಿಳೆ, ಸ್ಥಿತಿ ಗಂಭೀರ!