
ನವದೆಹಲಿ (ಅ. 29): ದೇಶದಲ್ಲಿ ಭಯೋತ್ಪಾದನಾ ನಿಗ್ರಹಕ್ಕೆಂದೇ ಪ್ರತ್ಯೇಕವಾಗಿ ರಚಿಸಲಾಗಿರುವ ರಾಷ್ಟ್ರೀಯ ಭದ್ರತಾ ಪಡೆ(ಎನ್ಎಸ್ಜಿ)ಗೆ ಕಳೆದ ೬ ತಿಂಗಳಿಂದ ಮುಖ್ಯಸ್ಥರೇ ಇಲ್ಲ. ಇದರಿಂದಾಗಿ ತುರ್ತು ಪರಿಸ್ಥಿತಿ ಬಂದೊದಗಿದಾಗ
ಯಾವ ರೀತಿಯ ಕಾರ್ಯಾಚರಣೆಗೆ ಮುಂದಾಗಬೇಕೆಂಬ ನಿರ್ದೇಶನ ನೀಡುವವರಿಲ್ಲದ ಸ್ಥಿತಿಯಲ್ಲಿ ಎನ್ಎಸ್ಜಿ ಇದೆ ಎಂದು ಹೇಳಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಈ ಕುರಿತು ಕೇಂದ್ರ ಗೃಹ ಇಲಾಖೆ ಮಧ್ಯಸ್ಥಿಕೆ ವಹಿಸಿ, ಮುಖ್ಯಸ್ಥರ ನೇಮಿಸುವಂತೆ ವಿಶೇಷ ಭದ್ರತಾ ಪಡೆ ಕೇಳಿಕೊಂಡಿತ್ತು. ಮೇಜರ್ ಜನರಲ್ ಶಶಾಂಕ್ ಮಿಶ್ರಾ ಅವರು ಏಪ್ರಿಲ್ನಲ್ಲಿ ಪದೋನ್ನತಿ ಹೊಂದಿದ್ದರು. ಇದಾದ ನಂತರ ಎನ್ಎಸ್ಜಿ ಹುದ್ದೆಗೆ ಯಾರನ್ನೂ ನೇಮಕ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಎನ್ಎಸ್ಜಿಯ ಐಜಿಯೊಬ್ಬರಿಗೆ ಹೆಚ್ಚುವರಿಯಾಗಿ ಎನ್ಎಸ್ಜಿ ಮುಖ್ಯಸ್ಥರ ಜವಾಬ್ದಾರಿ ವಹಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.