
ಶಬರಿಮಲೆ[ಡಿ.10]: ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ಸುಪ್ರೀಂಕೋರ್ಟ್ ಹೊರಡಿಸಿದ ಆದೇಶ ಹಾಗೂ ಆ ತರುವಾಯ ಕೇರಳದಲ್ಲಿ ನಡೆದ ಹಿಂಸಾಘಟನೆಗಳಿಂದ ಭಕ್ತರ ತೀವ್ರ ಕೊರತೆ ಎದುರಿಸುತ್ತಿದ್ದ ಇಲ್ಲಿನ ಅಯ್ಯಪ್ಪ ದೇಗುಲದತ್ತ ಕೊನೆಗೂ ಭಕ್ತಾದಿಗಳು ಮುಖ ಮಾಡಿದ್ದಾರೆ. ಕಳೆದ ಕೆಲ ದಿನಗಳಿಂದ ದೇಗುಲಕ್ಕೆ ಆಗಮಿಸುವ ಭಕ್ತರ ಸಂಖ್ಯೆಯಲ್ಲಿ ದಿನೇ ದಿನೇ ಗಣನೀಯ ಏರಿಕೆ ಕಂಡುಬರುತ್ತಿದೆ.
ಅಯ್ಯಪ್ಪ ಭಕ್ತೆಯನ್ನು ಕೇರಳ ಸರ್ಕಾರ ಬಂಧಿಸಿತೇ?
ದೇಗುಲ ಸುತ್ತಮುತ್ತಲ ಪ್ರದೇಶಗಳಲ್ಲಿ ಅತಿಯಾದ ಭದ್ರತೆ ಹಾಕಿರುವುದಕ್ಕೆ ಕೇರಳ ಹೈಕೋರ್ಟ್, ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ಭಕ್ತಾದಿಗಳ ತಪಾಸಣೆ ಕೆಲಸದಲ್ಲಿ ಪೊಲೀಸರು ಸ್ವಲ್ಪ ಸಡಿಲಿಕೆ ತೋರಿದ್ದರು. ಮತ್ತೊಂದೆಡೆ ಕಳೆದ 15 ದಿನಗಳಿಂದ ಶಬರಿಮಲೆ ಸೇರಿದಂತೆ ಕೇರಳದ ಯಾವುದೇ ಭಾಗಗಳಲ್ಲಿ ಅಯ್ಯಪ್ಪನ ವಿಷಯ ಸಂಬಂಧ ಯಾವುದೇ ಹಿಂಸಾಚಾರವೂ ನಡೆದಿಲ್ಲ. ಈ ಎಲ್ಲಾ ಕಾರಣಗಳಿಂದ ಸ್ವಲ್ಪ ನಿರಾತಂಕರಾಗಿರುವ ಭಕ್ತರು ಮತ್ತೆ ದೇಗುಲದತ್ತ ಮುಖ ಮಾಡಿದ್ದಾರೆ ಎನ್ನಲಾಗಿದೆ.
ಕೋರ್ಟ್ ಸಮಯ ಹಾಳು ಮಾಡಿದ್ದಕ್ಕೆ ಬಿಜೆಪಿ ನಾಯಕಿಗೆ ದಂಡ!
ಡಿ.3ರಂದು 79306, ಡಿ.4ಕ್ಕೆ 61037, ಡಿ.5ಕ್ಕೆ 51335, ಡಿ.6ಕ್ಕೆ 45000, ಡಿ.7ಕ್ಕೆ 85126 ಭಕ್ತಾದಿಗಳು ದೇಗುಲಕ್ಕೆ ಆಗಮಿಸಿ ದರ್ಶನ ಪಡೆದಿದ್ದಾರೆ. ಹೀಗಾಗಿ ಈ ವರ್ಷದ ವಾರ್ಷಿಕ ಯಾತ್ರೆ ಸಮಯ ಆರಂಭವಾದಾಗಿನಿಂದಲೂ ದೇಗುಲ ಸುತ್ತಮುತ್ತಲೂ ಕಾಣದಿದ್ದ ಜನಸಂದಣಿ, ಸರದಿ ಮತ್ತೆ ಕಾಣ ಸಿಕ್ಕಿದೆ.
ಕರ್ನಾಟಕದ ‘ಶಬರಿಮಲೆ’ಯಲ್ಲೂ ಮಹಿಳೆಯರಿಗಿಲ್ಲ ಎಂಟ್ರಿ! ಬಂದ್ರೆ ಕಲ್ಲಾಗ್ತಾರೆ!
ಈ ವರ್ಷ ಭಕ್ತರ ಆಗಮನ ಕಡಿಮೆ ಆದ ಹಿನ್ನೆಲೆಯಲ್ಲಿ, ಖ್ಯಾತನಾಮರ ಮೂಲಕ ಜಾಹೀರಾತು ನೀಡಿ, ಭಕ್ತರನ್ನು ಸೆಳೆಯುವ ಬಗ್ಗೆಯೂ ದೇಗುಲದ ಆಡಳಿತ ಮಂಡಳಿ ಚಿಂತನೆ ನಡೆಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ