
ಚಿತ್ರದುರ್ಗ(ಜು.25): ಮಹಿಳೆಯರ ರಕ್ಷಣೆಗಾಗಿ ಚಿತ್ರದುರ್ಗ ಪೊಲೀಸ್ ಇಲಾಖೆ ವಿನೂತನ ಪಡೆ ರಚಿಸಿದೆ. 40 ಮಹಿಳಾ ಪೊಲೀಸರಿಗೆ ವಿಶೇಷ ತರಬೇತಿ ನೀಡಿ ’ಓಬವ್ವ ಪಡೆ’ ಗೆ ಚಾಲನೆ ನೀಡಲಾಗಿದೆ.
ಓಬವ್ವ ಪಡೆಗೆ ಚಾಲನೆ ನೀಡಿ ಮಾತನಾಡಿದ ಪೂರ್ವ ವಲಯ ಐಜಿಪಿ ಶರತ್ ಚಂದ್ರ, ಮಹಿಳೆಯರ ರಕ್ಷಣೆಗೆಂದೇ ಈ ವಿಶೇಷ ಪಡೆ ರಚಿಸಲಾಗಿದ್ದು, ಪುಂಡರಿಗೆ ಸಿಂಹಸ್ವಪ್ನವಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.
ನಗರದ ತರಾಸು ರಂಗ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವಿ.ವಿ ಜೋತ್ನ್ಸಾ, ಎಸ್ಪಿ ಶ್ರೀನಾಥ್ ಜೋಶಿ, ಸಿಇಓ ರವೀಂದ್ರ, ಜಿಲ್ಲಾ ಪಂಚಾಯತ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಮತ್ತಿತರರು ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.