
ಬೆಂಗಳೂರು: ಪ್ರತಾಪ್ ಸಿಂಹ ಬೆಂಬಲಿಗರಿಂದ ರಾಣಿ ಚೆನ್ನಮ್ಮ ಹಾಗೂ ವೀರ ವನಿತೆ ಓಬವ್ವಳಿಗೆ ಅವಮಾನ ಮಾಡುವಂತಹ ಪೋಸ್ಟ್ ಹಾಕಿದ್ದಾರೆ. ರಾಣಿ ಚೆನ್ನಮ್ಮ ಹಾಗೂ ಒನಕೆ ಓಬವ್ವರಿಗೆ ಭಾರೀ ಅವಮಾನ ಮಾಡುವ ಮೂಲಕ ಕನ್ನಡಿಗರ ಸ್ವಾಭಿಮಾನಕ್ಕೆ ಸಂಸದ ಪ್ರತಾಪ್ ಸಿಂಹ ಬೆಂಬಲಿಗರು ಪೆಟ್ಟು ಕೊಟ್ಟಿದ್ದಾರೆ.
ಪ್ರತಾಪ್ ಸಿಂಹ ಫಾರ್ ಸಿಎಂ ಹಾಗೂ ಐ ಸಪೋರ್ಟ್ ಪ್ರತಾಪ್ ಸಿಂಹ ಫೇಸ್ ಬುಕ್ ಪೇಜ್ನಲ್ಲಿ ಪದ್ಮಾವತಿ ಚಲನಚಿತ್ರ ವಿರೋಧಿಸುವ ಭರದಲ್ಲಿ ವೀರರಾಣಿಯರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಲಾಗಿದ್ದು, ಚೆನ್ನಮ್ಮ ಬ್ರಿಟೀಷರ ಜೊತೆ ಅನೈತಿಕ ಸಂಬಂಧ ಹೊಂದಿದ್ದಳು, ಓಬವ್ವ ಹೈದರಾಲಿ ಜೊತೆ ಮಂಚ ಹಂಚಿಕೊಂಡಿದ್ದಳು ಎನ್ನಲಾಗಿದೆ.
ಪದ್ಮಾವತಿ ಚಲನಚಿತ್ರದ ಬೆಂಬಲಕ್ಕೆ ನಿಂತಿರೋ ಕನ್ನಡ ಚಿತ್ರರಂಗದ ನಡೆ ವಿರೋಧಿಸಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಲಾಗಿದ್ದು, ಬಳಿಕ, ಕೋಪ ಬಂತಲ್ವಾ? ಎಂದು ಪೋಸ್ಟ್ ಮಾಡಿರುವ ಪ್ರತಾಪ್ ಬೆಂಬಲಿಗರು, ಹಾಗಿದ್ರೆ ಕನ್ನಡ ಚಿತ್ರರಂಗಕ್ಕೆ ಇಂಥ ಕಥೆಗಳ ವಿರುದ್ದ ಕೋಪ ಬರ್ತಿಲ್ವಾ ಎಂದು ಪ್ರಶ್ನಿಸಿದ್ದಾರೆ.
ಉದಾಹರಣೆ ಕೊಡೋ ಭರದಲ್ಲಿ ವೀರರಾಣಿಯರಿಗೆ ಘೋರ ಅಪಮಾನ ಮಾಡಿರುವ ಬಗ್ಗೆ ಫೇಸ್ ಬುಕ್ ಪೇಜ್ನಲ್ಲೇ ಜನ ಸಾಮಾನ್ಯರು ತರಾಟೆಗೆ ತೆಗೆದುಕೊಂಡಿದ್ದಾರೆ.
ಆದರೆ ಸಂಸದ ಪ್ರತಾಪ್ ಸಿಂಹ ಅದಕ್ಕೂ ತನಗೂ ಯಾವುದೇ ಸಂಬಂಧವಿಲ್ಲವೆಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.