ಪದ್ಮಶ್ರೀ ತಿರಸ್ಕರಿಸಿದ ಸಿಎಂ ಸಹೋದರಿ!: ಕಾರಣವೇನು?

Published : Jan 27, 2019, 07:46 AM IST
ಪದ್ಮಶ್ರೀ ತಿರಸ್ಕರಿಸಿದ ಸಿಎಂ ಸಹೋದರಿ!: ಕಾರಣವೇನು?

ಸಾರಾಂಶ

 ಸಿಎಂ ನವೀನ್‌ ಪಟ್ನಾಯಕ್‌ ಅವರ ಅಕ್ಕ, ಸಾಹಿತಿ ಗೀತಾ ಮೆಹ್ತಾ ಅವರು ಪದ್ಮಶ್ರೀ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ. ಇದಕ್ಕೆ ಕಾರಣವೇನು? ಇಲ್ಲಿದೆ ವಿವರ

ಭುವನೇಶ್ವರ[ಜ.27]: ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಅವರ ಅಕ್ಕ, ಸಾಹಿತಿ ಗೀತಾ ಮೆಹ್ತಾ ಅವರು ಪದ್ಮಶ್ರೀ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ. ಚುನಾವಣಾ ವರ್ಷದಲ್ಲಿ ತಮಗೆ ಈ ಪ್ರಶಸ್ತಿ ನೀಡುತ್ತಿರುವುದು ತಪ್ಪು ಅಭಿಪ್ರಾಯ ಮೂಡಿಸಬಹುದು ಎಂಬ ಕಾರಣ ನೀಡಿ ಅವರು ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ್ದಾರೆ.

ಈ ಕುರಿತು ನ್ಯೂಯಾರ್ಕ್ನಿಂದ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಗೀತಾ ಮೆಹ್ತಾ, ‘ಕೇಂದ್ರ ಸರ್ಕಾರ ನಾನು ಪದ್ಮಶ್ರೀಗೆ ಅರ್ಹಳು ಎಂದು ಪರಿಗಣಿಸಿದ್ದಕ್ಕೆ ಆಭಾರಿಯಾಗಿದ್ದೇನೆ. ಆದರೆ ಲೋಕಸಭೆ ಚುನಾವಣೆ ಹತ್ತಿರ ಬರುತ್ತಿರುವುದರಿಂದ ನನಗೆ ಪ್ರಶಸ್ತಿ ದೊರಕಿರುವುದು ತಪ್ಪು ಅಭಿಪ್ರಾಯ ಮೂಡಿಸಬಹುದು. ಇದರಿಂದ ನನಗೂ ಮುಜುಗರ, ಸರ್ಕಾರಕ್ಕೂ ಮುಜುಗರ. ಹೀಗಾಗಿ ನಾನು ಪ್ರಶಸ್ತಿ ಸ್ವೀಕರಿಸುವುದಿಲ್ಲ’ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯ ಜೊತೆಗೆ ಒಡಿಶಾದಲ್ಲಿ ವಿಧಾನಸಭೆ ಚುನಾವಣೆಯೂ ಈ ವರ್ಷವೇ ನಡೆಯಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು