ಥ್ಯಾಂಕ್ಯೂ ಸುಪ್ರೀಂ: ಹಸೆಮಣೆ ಏರಲಿದ್ದಾರೆ ಮೊದಲ ತೃತೀಯ ಲಿಂಗಿ ಆಫೀಸರ್!

Published : Sep 10, 2018, 03:13 PM ISTUpdated : Sep 19, 2018, 09:21 AM IST
ಥ್ಯಾಂಕ್ಯೂ ಸುಪ್ರೀಂ: ಹಸೆಮಣೆ ಏರಲಿದ್ದಾರೆ ಮೊದಲ ತೃತೀಯ ಲಿಂಗಿ ಆಫೀಸರ್!

ಸಾರಾಂಶ

ಸಲಿಂಗ ಕಾಮ ಅಪರಾಧವಲ್ಲ ಎಂದ ಸುಪ್ರೀಕೋರ್ಟ್! ಮದುವೆಯಾಗಲು ಸಜ್ಜಾಗಿದ್ದಾರೆ ತೃತೀಯ ಲಿಂಗಿ ಅಧಿಕಾರಿ! ಒಡಿಶಾದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ಐಶ್ವರ್ಯ! ತಮ್ಮ ಬಾಯ್‌ಫ್ರೆಂಡ್ ಜೊತೆ ಮದುವೆಯಾಗಲು ಮುಂದಾದ ಐಶ್ವರ್ಯ

ಭುವನೇಶ್ವರ್(ಸೆ.10): ಸಲಿಂಗ ಕಾಮ ಅಪರಾಧ ಅಲ್ಲ ಎಂಬ ಸುಪ್ರೀಂಕೋರ್ಟ್ ಆದೇಶ, ದೇಶದಲ್ಲಿ ಹಲವು ಕ್ರಾಂತಿಕಾರಕ ಬದಲಾವಣೆಗೆ ನಾಂದಿ ಹಾಡಿದೆ. ಇದಕ್ಕೆ ಪುಷ್ಠಿ ನೀಡುವಂತೆ ಒಡಿಶಾದ ಮೊದಲ ತೃತೀಯಲಿಂಗಿ ಅಧಿಕಾರಿಯೊಬ್ಬರು ಮದುವೆಗೆ ಸಜ್ಜಾಗುತ್ತಿದ್ದಾರೆ.

ಐಶ್ವರ್ಯ ಎಂಬ ತೃತೀಯ ಲಿಂಗಿ ಒಡಿಶಾದ ಮೊದಲ ತೃತೀಯ ಲಿಂಗಿ ಅಧಿಕಾರಿ. ರಾಜ್ಯದ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಐಶ್ವರ್ಯ, ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಇದೀಗ ಮದುವೆಗೆ ಸಜ್ಜಾಗಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಐಶ್ವರ್ಯ, ಸುಪ್ರೀಂಕೋರ್ಟ್ ತೀರ್ಪು ಲೈಂಗಿಕ ಅಲ್ಪಸಂಖ್ಯಾತರ ಹೋರಾಟಕ್ಕೆ ಸಂದ ಜಯವಾಗಿದ್ದು, ತಾವೂ ಕೂಡ ತಮ್ಮ ಬಹುಕಾಲದ ಗೆಳೆಯನೊಂದಿಗೆ ಮದುವೆಯಾಗುತ್ತಿರುವುದಾಗಿ ತಿಳಿಸಿದ್ದಾರೆ.

ತಮಗೊಬ್ಬ ಬಾಯ್‌ಫ್ರೆಂಡ್ ಇರುವುದಾಗಿ ಹೇಳಿರುವ ಐಶ್ವರ್ಯ, ಸುಪ್ರೀಕೋರ್ಟ್ ತೀರ್ಪಿನಿಂದ ನಾವು ಮದುವೆಯಾಗುವ ಆಸೆ ಚಿಗುರೊಡೆದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

2010 ರಲ್ಲಿ ಒಡಿಶಾದ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿದ್ದ ಐಶ್ವರ್ಯ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?