
ಒಡಿಶಾ(ಸೆ.26): ಒಡಿಶಾದ ಕಲಹಂದಿಯಲ್ಲಿ ತಾಯಿಯ ಅಂತ್ಯ ಸಂಸ್ಕಾರಕ್ಕೆ ಯಾರೂ ಬಾರದೆ, ಸುಡಲು ಕಟ್ಟಿಗೆ ಇಲ್ಲದೆ ಆ ತಾಯಿಯ ನಾಲ್ವರು ಹೆಣ್ಣು ಮಕ್ಕಳು ನರಳಿದ ಘಟನೆ ನಡೆದಿದೆ.
75 ವರ್ಷದ ತಾಯಿ ಕನಕ ಸತ್ಪತಿ ಶುಕ್ರವಾರ ಸಾವನ್ನಪ್ಪಿದ್ದಾರೆ. ತಾಯಿಯ ದೇಹವನ್ನು ಸ್ಮಶಾನಕ್ಕೆ ಸಾಗಿಸಲು ನಾಲ್ವರು ಹೆಣ್ಣು ಮಕ್ಕಳು ಸಾರ್ವಜನಿಕರ ಸಹಾಯ ಕೋರಿದ್ದಾರೆ. ಇವರ ಸಹಾಯಕ್ಕೆ ಯಾರು ಬಂದಿಲ್ಲ.
ಸ್ಮಶಾನದಲ್ಲಿ ಅಂತ್ಯ ಸಂಸ್ಕಾರಕ್ಕೆ ಕಟ್ಟಿಗೆ ಇಲ್ಲದೆ ಪರದಾಡಿದ್ದಾರೆ. ಹಾಗೋ ಹೀಗೋ ತಾಯಿಯ ಮೃತ ದೇಹವನ್ನು ಹೊತ್ತುಕೊಂಡು ಸ್ಮಶಾನಕ್ಕೆ ಹೋಗಿದ್ದಾರೆ.
ಅಂತ್ಯ ಸಂಸ್ಕಾರಕ್ಕೆ ಕಟ್ಟಿಗೆ ಇಲ್ಲದ ಕಾರಣಕ್ಕೆ ತಾವು ವಾಸಿಸುವ ಮನೆಯ ಛಾವಣಿಯ ಕಟ್ಟಿಗೆಗಳನ್ನೇ ತಾಯಿ ಅಂತ್ಯ ಸಂಸ್ಕಾರಕ್ಕೆ ಬಳಸಿ, ಕಾರ್ಯ ನಿರ್ವಹಿಸಿದ್ದಾರೆ.
ಮೃತ ತಾಯಿಗೆ ನಾಲ್ವರು ಹೆಣ್ಣು ಮಕ್ಕಳು. ಅವರಲ್ಲಿ ಇಬ್ಬರು ವಿಧವೆಯರು. ಇನ್ನಿಬ್ಬರ ಗಂಡಂದಿರು ಅವರ ಜೊತೆ ವಾಸಿಸುತ್ತಿಲ್ಲ. ಇವರು ಪ್ರತಿ ನಿತ್ಯ ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದಾರೆ. ಒಡಿಶಾದಲ್ಲಿ ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿವೆ ಎಂಬುದು ವಿಷಾದನೀಯ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.