
ಕೊಪ್ಪಳ(ಸೆ.09): ರಾಜ್ಯದ ಮುಖ್ಯಂತ್ರಿಗಳೇ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ ಆದರೆ ಕೊಪ್ಪಳ ಪ್ರಭಾರ ಜಿಲ್ಲಾಧಿಕಾರಿ ಮಾತ್ರ ರಜೆ ಕೊಡಬಾರದು ಎಂದು ಆದೇಶಿಸಿದ್ದಾರೆ. ಮುಖ್ಯಮಂತ್ರಿಯ ಆದೇಶವನ್ನೇ ಕಡೆಗಣಿಸಿರುವ ಜಿಲ್ಲಾ ಪಂಚಾಯತ್ ಸಿಇಒ ರಾಮಚಂದ್ರನ್ ಪ್ರತಿಭಟನೆಯಲ್ಲಿ ಭಾಗಿಯಾದರೆ ಆಯಾ ಶಾಲೆಗಳ ಮುಖ್ಯಸ್ಥರೇ ಹೊಣೆ ಎಂದು ನಿನ್ನೆ ಫರ್ಮಾನು ಹೊರಡಿಸಿದ್ದಾರೆ.
ಸಿಇಒ ರಾಮಚಂದ್ರನ್ ಮೂಲತಃ ತಮಿಳುನಾಡಿನವರಾಗಿದ್ದಾರೆ. ಇತ್ತ ಕರ್ನಾಟಕ ಹೊತ್ತಿ ಉರಿಯುತ್ತಿದ್ದರೂ ಈ ಪ್ರಭಾರ ಜಿಲ್ಲಾಧಿಕಾರಿ ಮಾತ್ರ ಕನ್ನಡ ವಿರೋಧಿ ಧೋರಣೆಯನ್ನು ಅನುಸರಿಸಿದ್ದಾರೆ. ಇವರ ಈ ಆದೇಶದಿಂದ ತಮಿಳು ಪ್ರೇಮ ಸ್ಪಷ್ಟವಾಗಿ ಕಂಡು ಬಂದಿದೆ.
ಅವರ ಈ ನಡೆಗೆ ಕೊಪ್ಪಳದಾದ್ಯಂತ ಸಾಕಷ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ನಡೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.