
ಪಿರಿಯಾಪಟ್ಟಣ(ಅ.20): ಅಂಗಡಿಗಳಿಗೆ ಮಾರಾಟ ಮಾಡಲು ತಂದಿದ್ದ 700 ಕೆಜಿ ಪ್ಲಾಸ್ಟಿಕ್ ಕವರ್ಗಳನ್ನು ಪುರಸಭಾ ಅಧಿಕಾರಿಗಳು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪಟ್ಟಣದ ಅಂಗಡಿಗಳಿಗೆ ಮಾರಾಟ ಮಾಡಲು ಮಂಗಳೂರಿನಿಂದ ತರಲಾಗಿದ್ದ 700 ಕೆ.ಜಿ ಪ್ಲಾಸ್ಟಿಕ್ ಕವರ್ಗಳನ್ನು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ವಶಪಡಿಸಿಕೊಂಡಿರುವ ಪುರಸಭಾ ಅಕಾರಿಗಳು ಪ್ರಕರಣ ದಾಖಲಿಸಿಕೊಂಡು ವಾಹನ ಸಮೇತ ಪ್ಲಾಸ್ಟಿಕ್ ಕವರ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಾರಾಟ ಮಾಡಲು ಬಂದಿದ್ದ ಮಹಮ್ಮದ್ ಮುಸ್ತ, ಅಬ್ದುಲ್ ಖಾದರ್ ಹಾಗೂ ಮಹಮ್ಮದ್ ಎಂಬವರನ್ನು ವಿಚಾರಣೆಗೆ ಒಳಪಡಿಸಿದ್ದು, ಮುಂದಿನ ಕ್ರಮಕ್ಕಾಗಿ ಉಪ ವಿಭಾಗಾಕಾರಿಗಳಿಗೆ ಒಪ್ಪಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಪುರಸಭೆ ಮುಖ್ಯಾಕಾರಿ ಡಿ. ಪುಟ್ಟರಾಜು, ಪರಿಸರ ಎಂಜಿನಿಯರ್ ರವಿಕುಮಾರ್, ವ್ಯವಸ್ಥಾಪಕ ರೇವಣ್ಣ, ಆರ್ಐ ಮಧುಸೂಧನ್, ಆರೋಗ್ಯ ನಿರೀಕ್ಷಕ ರಾಮನರಸಯ್ಯ, ಸಿಬ್ಬಂದಿಗಳಾದ ಕುಮಾರ, ಉಮೇಶ್, ರಮೇಶ, ಮಂಜು ಭಾಗವಹಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.