ಪ್ರಧಾನಿಯನ್ನು ಬಿಳಿ ಗಡ್ಡದ ಮುದುಕನೆಂದು ತಿವಿದ ತಿವಾರಿ

Published : Dec 27, 2017, 12:52 PM ISTUpdated : Apr 11, 2018, 01:11 PM IST
ಪ್ರಧಾನಿಯನ್ನು ಬಿಳಿ ಗಡ್ಡದ ಮುದುಕನೆಂದು ತಿವಿದ ತಿವಾರಿ

ಸಾರಾಂಶ

ಕಾಂಗ್ರೆಸ್ ಮುಖಂಡ ಮನೀಶ್ ತಿವಾರಿ  ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ (ಡಿ.27): ಕಾಂಗ್ರೆಸ್ ಮುಖಂಡ ಮನೀಶ್ ತಿವಾರಿ  ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿಶ್ವದಾದ್ಯಂತ ಚಿಮಣಿ ಮೂಲಕ ಬಿಳಿ ಗಡ್ಡದ ಮನುಷ್ಯನೋರ್ವ ಮನೆಗೆ ಬಂದು ಹಣವನ್ನು ಇರಿಸಿಹೋದರೆ ಭಾರತದಲ್ಲಿ ಪರಿಸ್ಥಿತಿ ಬೇರೆಯಾಗಿದೆ.

ಬಿಳಿ ಗಡ್ಡದ ವಯಸ್ಸಾದ ಮನುಷ್ಯನೋರ್ವ ನಿಮ್ಮ ಮನೆಗೆ ಟಿವಿಗಳ ಮೂಲಕ ಆಗಮಿಸುತ್ತಾರೆ.ನಿಮ್ಮ ಬಳಿ ಇರುವ ಹಣವನ್ನೆಲ್ಲಾ ದೋಚಿಕೊಂಡು ಹೋಗುತ್ತಾರೆ ಎಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಸರ್ಕಾರ ಜಾರಿಗೆ ತಂದ ಹೊಸ ರೀತಿಯಾದ ಸರಕು ಮತ್ತು ಸೇವಾ ತೆರಿಗೆ ಹಾಗೂ ನೋಟು ಅಮಾನ್ಯೀಕರಣವನ್ನು ಗುರಿಯಾಗಿಸಿಕೊಂಡು ಇಂತಹ  ಟ್ವೀಟ್ ಮಾಡಿದ್ದಾರೆ. ನಿಮ್ಮ ಲಾಕರ್, ಪಾಕೆಟ್ ಎಲ್ಲಾ ಕಡೆ ಇರುವ ಹಣವನ್ನೂ ಕೂಡ ದೋಚುತ್ತಾರೆ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅನ್ಯ ಧರ್ಮಿಯ ಜೊತೆ ಮದುವೆ: ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ- ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ರಸಗೊಬ್ಬರ ಬಳಕೆ ಕಡಿಮೆ ಮಾಡಿ, ಮಣ್ಣಿನ ಆರೋಗ್ಯ ಕಾಪಾಡಿ: ಸಿಎಂ ಸಿದ್ದರಾಮಯ್ಯ ಸಲಹೆ