
ಬೆಂಗಳೂರು(ಜು.18): ಬ್ಯಾನ್ ಆದ 500 ಹಾಗೂ ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಮತ್ತೊಂದು ಅವಕಾಶ ನೀಡುವುದಿಲ್ಲ ಅಂತಾ ಸುಪ್ರೀಂಕೋರ್ಟ್ಗೆ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಹಳೇ ನೋಟುಗಳ ಠೇವಣಿಗೆ ಮತ್ತೊಂದು ಅವಕಾಶ ಕೊಟ್ಟರೆ, ನೋಟು ಅಮಾನ್ಯದ ಉದ್ದೇಶಕ್ಕೇ ಸೋಲಾಗುತ್ತದೆ. ಅಲ್ಲದೆ,ಕಪ್ಪುಹಣವನ್ನು ನಿರ್ಮೂಲನೆ ಮಾಡುವ ಉದ್ದೇಶವೂ ಈಡೇರುವುದಿಲ್ಲ ಎಂದು ಅಫಿಡವಿಟ್'ನಲ್ಲಿ ಸರ್ಕಾರ ತಿಳಿಸಿದೆ.
ಹಳೇ ನೋಟುಗಳ ವಿನಿಮಯಕ್ಕೆ ಕಡೆಯ ಹಾಗೂ ಇನ್ನೊಂದು ಅವಕಾಶ ನೀಡಲು ಸಾಧ್ಯವೇ ಎಂದು ಪರಿಶೀಲಿಸಿ ಎಂದು ಕೋರ್ಟ್ ಇತ್ತೀಚೆಗೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಆದರೆ ಈ ಬಗ್ಗೆ ಹೇಳಿಕೆ ನೀಡಿರುವ ಸರ್ಕಾರಿ ವಕೀಲರು. ಈ ಹಿಂದೆ ಪೆಟ್ರೋಲ್ ಬಂಕ್ ಗಳಲ್ಲಿ ಟಿಕೆಟ್ ಬುಕ್ ಮಾಡಲು ಹಳೆಯ ನೋಟು ಬಳಸಲು ಅವಕಾಶ ನೀಡಲಾಗಿತ್ತು. ಆದರೆ ಆಗ ವ್ಯಾಪಕ ದುರ್ಬಳಕೆ ನಡೆಯಿತು. ಕಪ್ಪು ಹಣ ಬಿಳಿ ಮಾಡುವ ದಂಧೆ ನಡೆದವು. ಪುನಃ ಚಲಾವಣೆಗೆ ಅವಕಾಶ ನೀಡಿದರೆ, ಈ ಸಲವು ಕಾಳದಂಧೆಕೋರರಿಗೆ ನೆರವಾಗಬಹುದು. ಆಗ ಇಡೀ ಆಶಯವೇ ಭಂಗವಾಗುತ್ತದೆ ಎಂದು ಸುಪ್ರೀಂಕೋರ್ಟ್ ಗೆ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.