
ಕೋಲ್ಕತ್ತಾ(ಸೆ.7): ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ ಕಾರಣಕ್ಕೆ ಮಹಿಳೆಯೊಬ್ಬಳನ್ನು ಕಾಂಗ್ರೆಸ್ ಕಾರ್ಯಕರ್ತರು ಬೆತ್ತಲೆ ಮೆರವಣಿಗೆ ಮಾಡಿ ಥಳಿಸಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪ್ರಧಾನಿ ಮೋದಿ ಅವರನ್ನು ಹೊಗಳಿದ ಮಹಿಳೆಯನ್ನು ಕೋಲ್ಕತ್ತಾದ ಬೀದಿಯಲ್ಲಿ ಬೆತ್ತಲೆಗೊಳಿಸಿ ಕಾಂಗ್ರೆಸ್ ಕಾರ್ಯಕರ್ತರು ಥಳಿಸಿದ್ದಾರೆ ಎನ್ನಲಾಗಿತ್ತು.
ಹಿಂದೂ ಅಖಿಲೇಶ್ ಗುಪ್ತಾ ಎಂಬ ವ್ಯಕ್ತಿ ಮಹಿಳೆಯನ್ನು ಬೆತ್ತಲೆಗೊಳಿಸಿ ಥಳಿಸುತ್ತಿರುವ ಫೋಟೋವನ್ನು ತಮ್ಮ ಫೇಸ್ಬುಕ್ನಲ್ಲಿ ಶೇರ್ ಮಾಡಿದ್ದರು. ಆದರೆ ಇದೊಂದು ಸುಳ್ಳು ಸುದ್ದಿಯಾಗಿದ್ದು, ಅಸಲಿಗೆ ಈ ಫೋಟೋ ಪುರುಷರ ಗುಂಪೊಂದು ಆದಿವಾಸಿ ಮಹಿಳೆಯನ್ನು ಥಳಿಸುತ್ತಿದ್ದ ಫೋಟೋ ಎಂದು ಗೊತ್ತಾಗಿದೆ.
ಆದರೆ ರಾಜಕೀಯ ಅಶಾಂತಿಯ ವಾತಾವರಣ ಸೃಷ್ಟಿಸಲು ಈ ರೀತಿ ಫೋಟೋ ಬಳಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.