ಚಂಡಮಾರುತದ ಬಗ್ಗೆ ಆಮೆಗಳಿಗೆ ಸುಳಿವಿತ್ತೆ?

Published : May 04, 2019, 07:46 AM ISTUpdated : May 04, 2019, 07:49 AM IST
ಚಂಡಮಾರುತದ ಬಗ್ಗೆ ಆಮೆಗಳಿಗೆ ಸುಳಿವಿತ್ತೆ?

ಸಾರಾಂಶ

ನೈಸರ್ಗಿಕ ವಿಕೋಪ ಸಂಭವಿಸುವ ಮುನ್ನ ಪ್ರಾಣಿಗಳಿಗೆ ತಿಳಿಯುತ್ತದೆ ಎನ್ನುವುದು ನಂಬಿಕೆ. ಅಂತಯೆ ಈ ಬಾರಿ ಆಮೆಗಳಿಗೂ ಒಡಿಶಾದ ಚಂಡಮಾರುತದ ಬಗ್ಗೆ ತಿಳಿದಿತ್ತೆ?

ಭುವನೇಶ್ವರ: ಪ್ರತಿವರ್ಷ ಆಲಿವ್‌ ರಿಡ್ಲೆ ಆಮೆಗಳ ಸಾಮೂಹಿಕ ಮೊಟ್ಟೆಇಡುವ ವಿದ್ಯಮಾನಕ್ಕೆ ಸಾಕ್ಷಿಯಾಗುತ್ತಿದ್ದ ಒಡಿಶಾದ ಗಂಜಾಮ್‌ ಜಿಲ್ಲೆಯ ಋುಷಿಕುಲ್ಯಾ ರೂಕೆರಿ ಕಡಲ ತೀರಕ್ಕೆ ಈ ಬಾರಿ ಆಮೆಗಳೇ ಆಗಮಿಸಿಲ್ಲ. 

ಪ್ರತಿ ವರ್ಷ ಬೇಸಿಗೆಯಲ್ಲಿ 5 ಲಕ್ಷಕ್ಕೂ ಹೆಚ್ಚು ಮೊಟ್ಟೆಗಳನ್ನು ಇಡುತ್ತಿದ್ದ ಆಮೆಗಳು ಈ ಸಲ 3000ಕ್ಕಿಂತಲೂ ಕಡಿಮೆ ಮೊಟ್ಟೆಇಟ್ಟಿವೆ. ಫನಿ ಚಂಡಮಾರುತದ ಸುಳಿವು ಮೊದಲೇ ಸಿಕ್ಕಿದ್ದರಿಂದಲೇ ಅವು ಕಡಲ ತೀರಕ್ಕೆ ಆಗಮಿಸಿಲ್ಲ ಎಂದು ವಿಶ್ಲೇಷಿಸಲಾಗುತ್ತಿದೆ.

ಒಡಿಶಾದ ಕರಾವಳಿ ಮೆಕ್ಸಿಕೊ ಮತ್ತು ಕೋಸ್ಟಾರಿಕಾ ಬಳಿಕ ಆಲಿವ್‌ ರೆಡ್ಲೆ ಆಮೆಗಳ ಮೊಟ್ಟೆಇಡುವ ಅತಿದೊಡ್ಡ ಸ್ಥಳ ಎನಿಸಿಕೊಂಡಿದೆ. 1991ರಲ್ಲಿ ಆರು ಲಕ್ಷಕ್ಕೂ ಅಧಿಕ ಆಮೆಗಳು ಒಂದು ವಾರದಲ್ಲಿ ಮೊಟ್ಟೆಇಟ್ಟಿದ್ದವು. 

ಕಳೆದ ವರ್ಷ 4.75 ಲಕ್ಷ ಆಮೆಗಳು ಮೊಟ್ಟೆಇಟ್ಟಿದ್ದವು. ಈ ಸಂಖ್ಯೆ ಈ ವರ್ಷ ಕೇವಲ 3000ಕ್ಕೆ ಇಳಿದಿದೆ. ಒಡಿಶಾ ಕರಾವಳಿಯಲ್ಲಿ ಸಾಮೂಹಿಕ ಮೊಟ್ಟೆಇಡುವ ವಿದ್ಯಮಾನ ಆರಂಭವಾಗಿದ್ದರೂ ಆಮೆಗಳು ಕಡಲ ತೀರಕ್ಕೆ ಆಗಮಿಸುತ್ತಲೇ ಇಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲಷ್ಕರೆ-ಎ-ತಯ್ಯಬಾ ಸೇರಲು ಸಂಚು; ಶಿರಸಿ ಮೂಲದ ಉಗ್ರನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ; ಎನ್‌ಐಎ ಮಹತ್ವದ ತೀರ್ಪು
KRS ಪಕ್ಷದ ಕಾರ್ಯಕರ್ತರಿಗೆ ಡಿಜಿ-ಐಜಿಪಿ ಶಾಕ್; ರಾಜ್ಯಾದ್ಯಂತ ಕೇಸ್ ದಾಖಲಿಸಲು ಆದೇಶ!