ಸೈನಿಕರಿಗೆ ಅವಮಾನ ಮಾಡಿದ ಖ್ಯಾತ ಬಾಲಿವುಡ್ ನಟ ಓಂಪುರಿ!

Published : Oct 05, 2016, 03:16 AM ISTUpdated : Apr 11, 2018, 01:11 PM IST
ಸೈನಿಕರಿಗೆ ಅವಮಾನ ಮಾಡಿದ ಖ್ಯಾತ ಬಾಲಿವುಡ್ ನಟ ಓಂಪುರಿ!

ಸಾರಾಂಶ

ಮುಂಬೈ(ಅ.05): ಟಿವಿ ಕಾರ್ಯಕ್ರಮವೊಂದರಲ್ಲಿ  ಸೈನಿಕರಿಗೆ ಅವಮಾನ ಮಾಡಿದ ಆರೋಪದ ಮೇಲೆ ಖ್ಯಾತ ಬಾಲಿವುಡ್​ ನಟ ಓಂಪುರಿ  ವಿರುದ್ಧ ಮುಂಬೈನ ಅಂಧೇರಿ ಪೊಲೀಸ್​ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

ಭಾರತೀಯ ಸಿನಿಮಾ ನಿಮಾರ್ಪಕರ ಸಂಘ ಪಾಕ್  ಕಲಾವಿದರನ್ನು  ನಿಷೇಧಿಸುವ ಕುರಿತು ಚರ್ಚೆಯಲ್ಲಿ  ಉರಿ ಉಗ್ರ ದಾಳಿಯ ಕುರಿತಂತೆ ಓಂಪುರಿ ಮಾತನಾಡಿ, ಸೇನೆಗೆ ಸೈನಿಕರು ಸೇರಬೇಕೆಂದು ಹೇಳಿದ್ದು ಯಾರು? ಅವರಿಗೆ ಯಾರು ಶಸ್ತ್ರ ಎತ್ತಿಕೊಳ್ಳಲು ಹೇಳಿದ್ದರು? ಎಂದು  ಓಂಪುರಿ ಪ್ರಶ್ನಿಸಿದ್ದರು. ಅಲ್ಲದೆ ಬೇಕಿದ್ದರೆ ಕೆಲ ಜನರನ್ನು  ಪಾಕಿಸ್ತಾನಕ್ಕೆ ಆತ್ಮಾಹತ್ಯಾ ಬಾಂಬರ್​ಗಳನ್ನಾಗಿ  ಮಾಡಿ ಕಳಿಸಿ . ಇದು ಬಿಟ್ಟು ಯುದ್ಧ ಮಾಡಿ  ನಮ್ಮ ದೇಶವನ್ನು ಇಸ್ರೇಲ್ ಪ್ಯಾಲೆಸ್ತೀನ್ ಏಕೆ ಮಾಡುತ್ತೀರಿ ಎಂದಿದ್ದರು.

ಇದಕ್ಕೆ  ನಟ ಅನುಪಮ್  ಖೆರ್​ ಆದಿಯಾಗಿ  ಅನೇಕರು ಆಕ್ಷೇಪಿಸಿದ್ದರು. ಇನ್ನು ಇದು  ವಿವಾದವಾಗುತ್ತಲೇ ಹೇಳಿಕೆ ನೀಡಿದ ಓಂಪುರಿ  ನಾನು ಈ ಬಗ್ಗೆ ವಿಷಾದಿಸುತ್ತೇನೆ. ಮೊದಲು  ನಾನು ಉರಿ ದಾಳಿಯಲ್ಲಿ ಮಡಿದ ಹುತಾತ್ಮರ ಕುಟುಂದ ಬಳಿ ಕ್ಷಮ ಕೇಳುತ್ತೇನೆ.  ಅವರು ಕ್ಷಮೆ ನೀಡಿದ ಬಳಿಕ ಆಣನು ದೇಶ, ಸೇನೆಯ ಕ್ಷಮೆ ಕೋರುವೆ ಎಂದಿದ್ದಾರೆ. ಈ ಹೇಳಿಕೆಗೆ ನಾನು  ಶಿಕ್ಷೆಗೂ  ಯೋಗ್ಯನಿದ್ದೇನೆ  ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟಿವಿ ನೋಡ್ತಿದ್ದ ಬಾಲಕಿಗೆ ಅಪ್ಪನ ಆಗಮನದ ಬಗ್ಗೆ ಸೂಚನೆ ನೀಡಿದ ಜರ್ಮನ್ ಶೆಫರ್ಡ್‌ ಶ್ವಾನ: ವೀಡಿಯೋ ಭಾರಿ ವೈರಲ್
ಭಾರತ ಮಾತ್ರವಲ್ಲ ಮೆಕ್ಸಿಕೋದಲ್ಲೂ ಅದೇ ಕತೆ, ಸದನದಲ್ಲೇ ಜುಟ್ಟು ಹಿಡಿ ಎಳೆದಾಡಿದ ನಾಯಕಿಯರು