ನಿಮ್ಗೆ ಕಾಶ್ಮೀರ ಗೊತ್ತಿಲ್ಲ, ಐಪಿಎಲ್ ಟ್ವೀಟ್ ಮಾಡಿ: ಓಮರ್ 'ಗಂಭೀರ' ರಿಪ್ಲೈ!

Published : Apr 02, 2019, 06:03 PM IST
ನಿಮ್ಗೆ ಕಾಶ್ಮೀರ ಗೊತ್ತಿಲ್ಲ, ಐಪಿಎಲ್ ಟ್ವೀಟ್ ಮಾಡಿ: ಓಮರ್ 'ಗಂಭೀರ' ರಿಪ್ಲೈ!

ಸಾರಾಂಶ

ಕಣಿವೆಗೆ ಪ್ರತ್ಯೇಕ ಪ್ರಧಾನಿ ಮತ್ತು ರಾಷ್ಟ್ರಪತಿ ನೇಮಕ ವಿಚಾರ| ಎನ್‌ಸಿ ನಾಯಕ, ಮಾಜಿ ಸಿಎಂ ಓಮರ್ ಅಬ್ದುಲ್ಲಾಗೆ ಗೌತಮ್ ಗಂಭೀರ್ ಕ್ಲಾಸ್| ನಾನು ಸಮುದ್ರದ ಮೇಲೆ ನಡೆಯಲು ಬಯುಸತ್ತೇನೆ ಎಂದು ಕಿಚಾಯಿಸಿದ ಗೌತಮ್| ಗೌತಮ್ ಟ್ವೀಟ್ ಗೆ ಖಡಕ್ ರಿಪ್ಲೈ ಕೊಟ್ಟ ಓಮರ್| ಐಪಿಎಲ್ ಕುರಿತು ಮಾತನಾಡುವಂತೆ ಗೌತಮ್ ಗೆ ಸಲಹೆ|

ನವದೆಹಲಿ(ಏ.02): ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನಿ ಮತ್ತು ರಾಷ್ಟ್ರಪತಿ ನೇಮಿಸುವ ಪ್ರಸ್ತಾವನೆ ಮಾಡಿರುವ ನ್ಯಾಶನಲ್ ಕಾನ್ಫರೆನ್ಸ್ ನಾಯಕ ಮತ್ತು ಮಾಜಿ ಸಿಎಂ ಓಮರ್ ಅಬ್ದುಲ್ಲಾ ಅವರಿಗೆ ಬಿಜೆಪಿ ನಾಯಕ ಗೌತಮ್ ಗಂಭೀರ್ ಟಾಂಗ್ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಗೌತಮ್ ಗಂಭೀರ್, 'ಓಮರ್ ಅಬ್ದುಲ್ಲಾ ಕಣಿವೆಗೆ ಪ್ರತ್ಯೇಕ ಪ್ರಧಾನಿ ಮತ್ತು ರಾಷ್ಟ್ರಪತಿ ಬಯಸಿದರೆ ನಾನು ಸಮುದ್ರದಲ್ಲಿ ನಡೆಯಲು ಬಯಸುತ್ತೇನೆ..' ಎಂದು ಕಿಚಾಯಿಸಿದ್ದರು.

ಗಂಭೀರ್ ಟ್ವೀಟ್ ಗೆ ಅಷ್ಟೇ ಖಡಕ್ ಆಗಿ ಪ್ರತ್ಯುತ್ತರ ನೀಡಿರುವ ಓಮರ್ ಅಬ್ದುಲ್ಲಾ, 'ನನಗೆ ಕ್ರಿಕೆಟ್ ಕುರಿತು ಹೆಚ್ಚಿನ ಜ್ಞಾನವಿಲ್ಲ ಹೀಗಾಗಿ ನಾನು ಕ್ರಿಕೆಟ್ ಆಡಲ್ಲ. ಅದರಂತೆ ಗೌತಮ್ ಗಂಭೀರ್ ಅವರಿಗೆ ಕಾಶ್ಮೀರದ ಇತಿಹಾಸ ಗೊತ್ತಿಲ್ಲ, ಹೀಗಾಗಿ ಅವರು ಈ ವಿಷಯದ ಕುರಿತು ತಲೆ ಕೆಡಿಸಿಕೊಳ್ಳುವುದು ಬಿಟ್ಟು ಐಪಿಎಲ್ ಕುರಿತು ಟ್ವೀಟ್ ಮಾಡುವುದು ಒಳ್ಳೆಯದು ಎಂದು ವ್ಯಂಗ್ಯವಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ': ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ
ಗಂಡ ಉಳಿಯಲಿಲ್ಲ, ಎಗ್ಸಾಂ ಬರೆಯಲಿಲ್ಲ, ಕ್ಯಾನ್ಸಲ್ ಆಗಿದ್ದು ಬರೀ ಫ್ಲೈಟ್ ಅಲ್ಲ ನೂರಾರು ಮಂದಿ ಕನಸು