ಸಿದ್ದು ಕುಟುಂಬದ ಹಗರಣ 23ಕ್ಕೆ ಬಯಲು: ಬಿಎಸ್'ವೈ

Published : Sep 16, 2017, 09:17 AM ISTUpdated : Apr 11, 2018, 12:57 PM IST
ಸಿದ್ದು ಕುಟುಂಬದ ಹಗರಣ 23ಕ್ಕೆ ಬಯಲು: ಬಿಎಸ್'ವೈ

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬ, ಅವರ ಸಂಪುಟದ ಸಚಿವರು, ಕಾಂಗ್ರೆಸ್ ಶಾಸಕರು ನಡೆಸಿದ್ದಾರೆ ಎನ್ನಲಾದ ಭ್ರಷ್ಟಾಚಾರ ಕುರಿತಂತೆ ದಾಖಲೆ ಬಿಡುಗಡೆಗೊಳಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಇದೇ ತಿಂಗಳ 23ರ ಮುಹೂರ್ತ ನಿಗದಿಪಡಿಸಿದ್ದಾರೆ.

ಬೆಂಗಳೂರು(ಸೆ.16): ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬ, ಅವರ ಸಂಪುಟದ ಸಚಿವರು, ಕಾಂಗ್ರೆಸ್ ಶಾಸಕರು ನಡೆಸಿದ್ದಾರೆ ಎನ್ನಲಾದ ಭ್ರಷ್ಟಾಚಾರ ಕುರಿತಂತೆ ದಾಖಲೆ ಬಿಡುಗಡೆಗೊಳಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಇದೇ ತಿಂಗಳ 23ರ ಮುಹೂರ್ತ ನಿಗದಿಪಡಿಸಿದ್ದಾರೆ.

ಕಳೆದ ಹಲವು ದಿನಗಳಿಂದ ಸಿದ್ದರಾಮಯ್ಯ ವಿರುದ್ಧ ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ ಯಡಿಯೂರಪ್ಪ ಗುಡುಗುತ್ತಿದ್ದರು. ಯಾವಾಗ ಎಂದು ಸುದ್ದಿಗಾರರು ಕೇಳಿದಾಗಲೆಲ್ಲ ಇನ್ನೆರಡು ದಿನಗಳಲ್ಲಿ ಎಂಬ ಉತ್ತರ ನೀಡುತ್ತಲೇ ಬಂದಿದ್ದರು. ಇದೀಗ 23ಕ್ಕೆ ಬಿಡುಗಡೆ ಮಾಡುವುದಾಗಿ ಖುದ್ದು ಯಡಿಯೂರಪ್ಪ ತಿಳಿಸಿದ್ದಾರೆ. ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರ ರಹಿತ ಹಾಗೂ ಪಾರದರ್ಶಕ ಆಡಳಿತ ನೀಡುವುದಾಗಿ ಪದೇ ಪದೇ ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಸಂಪುಟದ ಸಚಿವರು, ಶಾಸಕರು ನಡೆಸಿರುವ ಭ್ರಷ್ಟಾಚಾರದ ಕರ್ಮಕಾಂಡವನ್ನು ಬಯಲು ಮಾಡುತ್ತೇನೆ.

ನಾನು ಆಧಾರ ರಹಿತವಾಗಿ ಆರೋಪ ಮಾಡುತ್ತಿಲ್ಲ. ಪುಕ್ಕಟೆ ಪ್ರಚಾರಕ್ಕಾಗಿಯೂ ಈ ಮಾತನ್ನು ಹೇಳುತ್ತಿಲ್ಲ. ಸಮಗ್ರ ದಾಖಲೆಗಳನ್ನು ಕಲೆ ಹಾಕಿ ಬಿಡುಗಡೆ ಮಾಡುತ್ತೇನೆ ಎಂದು ಪ್ರತಿಪಾದಿಸಿದರು. ನಾನು ‘್ರಷ್ಟಾಚಾರ ಪ್ರಕರಣ ಕುರಿತು ದಾಖಲೆ ಬಿಡುಗಡೆ ಮಾಡುವುದಾಗಿ ಹೇಳುತ್ತಿದ್ದಂತೆಯೇ ಬೆಚ್ಚಿ ಬಿದ್ದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಬಂಧಪಟ್ಟ ಕಡತಗಳನ್ನು ನಾಪತ್ತೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಾತ್ರೋರಾತ್ರಿ ಕಡತಗಳನ್ನು ಮಾಯ ಮಾಡಲಾಗುತ್ತಿದೆ. ಆದರೂ ನಮ್ಮದೇ ಆದ ಮೂಲಗಳಿಂದ ಕೆಲವು ದಾಖಲೆಗಳನ್ನು ಸಂಗ್ರಹಿಸಿದ್ದೇವೆ ಎಂದು ಯಡಿಯೂರಪ್ಪ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!