
ಮನಾಮಾ (ಜ.09): ಬಹ್ರೇನ್ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸೋಮವಾರ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಮೋದಿ ಸರ್ಕಾರ ಜನರಿಗೆ ಉದ್ಯೋಗ ಒದಗಿಸುವಲ್ಲಿ ವಿಫಲವಾಗಿದೆ.
ಉದ್ಯೋಗ ಸೃಷ್ಟಿ 8 ವರ್ಷದ ಕನಿಷ್ಠಕ್ಕೆ ಕುಸಿದಿದೆ. ಜನರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಚೀನಾ 2 ದಿನದಲ್ಲಿ ಸಾಧಿಸಿದ್ದನ್ನು ಭಾರತ 1 ವರ್ಷದಲ್ಲಿ ಸಾಧಿಸುತ್ತಿದೆ’ ಎಂದು ಟೀಕಿಸಿದರು. ‘ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ಬಂದಿದ್ದು, ಕೊಲೆಗಳು ನಡೆಯುತ್ತಿವೆ.
ಪತ್ರಕರ್ತರ ಹತ್ಯೆಗಳು ಸಂಭವಿಸುತ್ತಿವೆ. ಆಹಾರ ಸೇವನೆಗೂ ಸ್ವಾತಂತ್ರ್ಯ ಇಲ್ಲ’ ಎಂದರು. ‘ಇಷ್ಟೆಲ್ಲ ಆದರೂ ಪ್ರಧಾನಿ ಮಾತನಾಡುತ್ತಿಲ್ಲ. ನಮಗೆ ಮೌನ ಬೇಕಿಲ್ಲ. 2019ಕ್ಕೆ ಬಿಜೆಪಿಯನ್ನು ಸೋಲಿಸಲಿದ್ದೇವೆ’ ಎಂದು ಗುಡುಗಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.