ಲೋಕಸಭೆಯಲ್ಲಿನ ಕಾಂಗ್ರೆಸ್‌ ನಾಯಕ ಯಾರು? ಸಸ್ಪೆನ್ಸ್‌!

Published : Jun 17, 2019, 09:13 AM ISTUpdated : Jun 17, 2019, 09:27 AM IST
ಲೋಕಸಭೆಯಲ್ಲಿನ ಕಾಂಗ್ರೆಸ್‌ ನಾಯಕ ಯಾರು? ಸಸ್ಪೆನ್ಸ್‌!

ಸಾರಾಂಶ

ಲೋಕಸಭೆಯಲ್ಲಿನ ಕಾಂಗ್ರೆಸ್‌ ನಾಯಕ ಯಾರು? ಸಸ್ಪೆನ್ಸ್| ಇಂದಿನಿಂದ ಅಧಿವೇಶನ: ಆದರೂ ಆಯ್ಕೆ ಇಲ್ಲ| ವಿಪಕ್ಷಗಳ ಪಾಳಯದಲ್ಲೂ ಒಗ್ಗಟ್ಟು ಕಾಣುತ್ತಿಲ್ಲ

ನವದೆಹಲಿ[ಜೂ.17]: 17ನೇ ಲೋಕಸಭೆಯ ಚೊಚ್ಚಲ ಅಧಿವೇಶನ ಸೋಮವಾರದಿಂದ ಪ್ರಾರಂಭವಾಗುತ್ತಿದ್ದರೂ, ಲೋಕಸಭೆಯಲ್ಲಿನ ಕಾಂಗ್ರೆಸ್‌ ನಾಯಕ ಯಾರು ಎಂಬ ಪ್ರಶ್ನೆಗೆ ಈವರೆಗೂ ಉತ್ತರ ಸಿಕ್ಕಿಲ್ಲ. ಲೋಕಸಭೆ ಚುನಾವಣೆಯಲ್ಲಿನ ಹೀನಾಯ ಸೋಲಿನ ಬಳಿಕ ಪ್ರತಿಪಕ್ಷಗಳ ಜಂಘಾಬಲವೇ ಉಡುಗಿದಂತೆ ಕಂಡುಬರುತ್ತಿದೆ. ಸಾಮಾನ್ಯವಾಗಿ ಅಧಿವೇಶನಕ್ಕೂ ಮುನ್ನ ಪ್ರತಿಪಕ್ಷಗಳೆಲ್ಲಾ ಸಭೆ ಸೇರಿ, ಸರ್ಕಾರವನ್ನು ಯಾವ ರೀತಿ ತರಾಟೆಗೆ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಚರ್ಚಿಸುತ್ತವೆ. ಸಮನ್ವಯತೆ ಸಾಧಿಸುತ್ತವೆ. ಈ ಬಾರಿ ಅಂತಹ ಯಾವುದೇ ಸಭೆಯೂ ನಡೆದಿಲ್ಲ. ಹಲವು ಪಕ್ಷಗಳು ಲೋಕಸಭೆಯಲ್ಲಿನ ತಮ್ಮ ನಾಯಕನನ್ನೂ ಆಯ್ಕೆ ಮಾಡಿಕೊಂಡಿಲ್ಲ.

ಚುನಾವಣೆ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್‌ ಅಧ್ಯಕ್ಷ ಸ್ಥಾನವನ್ನು ತ್ಯಜಿಸಲು ರಾಹುಲ್‌ ಗಾಂಧಿ ನಿರ್ಧರಿಸಿದ್ದಾರೆ. ಅವರನ್ನು ಮುಂದುವರಿಸಲು ಅಥವಾ ಅವರು ಒಪ್ಪದಿದ್ದರೆ ಬೇರೊಬ್ಬರನ್ನು ಅವರ ಸ್ಥಾನಕ್ಕೆ ತರುವ ಕಸರತ್ತು ನಡೆಸುತ್ತಿರುವ ಕಾಂಗ್ರೆಸ್‌, ಲೋಕಸಭೆಯಲ್ಲಿನ ಕಾಂಗ್ರೆಸ್‌ ನಾಯಕನ ಆಯ್ಕೆ ಬಗ್ಗೆ ಇನ್ನೂ ತಲೆಕೆಡಿಸಿಕೊಂಡಂತಿಲ್ಲ.

ಕಳೆದ ಲೋಕಸಭೆಯಲ್ಲಿ ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಅವರು ಲೋಕಸಭೆ ಕಾಂಗ್ರೆಸ್‌ ನಾಯಕರಾಗಿದ್ದರು. ಈ ಬಾರಿ ಅವರು ಚುನಾವಣೆಯಲ್ಲಿ ಸೋತಿದ್ದಾರೆ. ಅವರ ಸ್ಥಾನಕ್ಕೆ ಶಶಿ ತರೂರ್‌ ಅಥವಾ ಮನೀಶ್‌ ತಿವಾರಿ ನೇಮಕವಾಗಬಹುದು ಎನ್ನಲಾಗುತ್ತಿತ್ತು. ಆದರೆ, ಕೇಂದ್ರ ಸರ್ಕಾರ ಸೋಮವಾರ ನಡೆಸಿದ ಸರ್ವಪಕ್ಷ ಸಭೆಯಲ್ಲಿ ಪಶ್ಚಿಮ ಬಂಗಾಳದ ಸಂಸದ ಅಧೀರ್‌ ರಂಜನ್‌ ಚೌಧರಿ ಹಾಗೂ ಕೇರಳ ಕಾರ್ಯಾಧ್ಯಕ್ಷ ಕೆ. ಸುರೇಶ್‌ ಭಾಗಿಯಾಗಿದ್ದಾರೆ. ಹೀಗಾಗಿ ಅವರಿಬ್ಬರಲ್ಲಿ ಯಾರಾದರೂ ಒಬ್ಬರು ಆಯ್ಕೆಯಾಗುತ್ತಾರಾ ಎಂಬ ಪ್ರಶ್ನೆಯೂ ಕೇಳಿಬರುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೆಸರು ಸರ್ವಜ್ಞ: ಹಿರಿಯ ಆಟಗಾರನ ಸೋಲಿಸಿ ಜಾಗತಿಕ ಚೆಸ್ ಶ್ರೇಯಾಂಕ ಪ್ರವೇಶಿಸಿದ 3 ವರ್ಷದ ಪೋರ
ಕೇಂದ್ರ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ: ಸಂಸದ ಯದುವೀರ್