ಮತ್ತೆ ಸಂಪುಟ ವಿಸ್ತರಣೆ ಪಕ್ಕಾ: ಅಸಮಾಧಾನಿತ ಶಾಸಕನಿಂದ ಬಂದ ನ್ಯೂಸ್

Published : Aug 24, 2019, 10:00 PM ISTUpdated : Aug 24, 2019, 10:03 PM IST
ಮತ್ತೆ ಸಂಪುಟ ವಿಸ್ತರಣೆ ಪಕ್ಕಾ: ಅಸಮಾಧಾನಿತ ಶಾಸಕನಿಂದ ಬಂದ ನ್ಯೂಸ್

ಸಾರಾಂಶ

ಬಿಎಸ್ ವೈ ಸಂಪುಟದ 17 ಸಚಿವರು ಪ್ರಮಾಣ ವಚನ ಸ್ವೀಕರಿಸಿ 4 ದಿನವಾಯ್ತು. ಆದ್ರೆ, ಈವರೆಗೂ ಸಚಿವರ ಖಾತೆ ಹಂಚಿಕೆ ಕಸರತ್ತು ಮುಗಿದಿಲ್ಲ. ಇದರ ನಡುವೆ ಮತ್ತೆ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಸಂಪುಟ ವಿಸ್ತರಣೆ ಬಗ್ಗೆ ಸಮಾಧಾನಿಕ ಶಾಸಕನಿಗೆ ಸ್ವತಃ ಹೈಕಮಾಂಡ್ ಹೇಳಿದೆಯಂತೆ. 

ಬೆಂಗಳೂರು, [ಆ.24]:  ಈ ಮೊದಲೇ ಹೇಳಿದ್ದ ಸುವರ್ಣ ನ್ಯೂಸ್ ಸುದ್ದಿ ಪಕ್ಕಾ ಆದಂತಿದೆ. ಮತ್ತೆ ಮೂವರು ಶಾಸಕರು ಬಿ.ಎಸ್.ಯಡಿಯೂರಪ್ಪ ಸಂಪುಟ ಸೇರ್ಪಡೆಯಾಗಲಿದ್ದು, ಮುಂದಿನ ವಾರ ಮೂವರು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇದಕ್ಕೆ ಪೂರಕವೆಂಬಂತೆ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನಗೊಂಡಿರುವ ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ ಮತ್ತೆ ಸಂಪುಟ ವಿಸ್ತರಣೆ ಆಗುತ್ತೆ ಎಂದು ಹೇಳಿದ್ದಾರೆ.

ಮುನಿದ ಮೂವರಿಗೆ ಮಂತ್ರಿ ಪಟ್ಟ, ಸೋಮವಾರ ಪ್ರಮಾಣ ವಚನ ಸಾಧ್ಯತೆ

ಇಂದು [ಶನಿವಾರ] ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಮೇಶ್ ಕತ್ತಿ,  ಮುಂದಿನ ವಾರದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆ ಆಗುತ್ತೆ. ಬಾಲಚಂದ್ರ ಜಾರಕಿಹೊಳಿ ಮತ್ತು  ಉಮೇಶ್ ಕತ್ತಿಗೆ  ಮಂತ್ರಿ ಸ್ಥಾನ ಸಿಗುತ್ತೆ. ಸ್ವಲ್ಪ ಕಾಯಿರಿ ಎಂದು ಬಿಜೆಪಿ ವರಿಷ್ಠರು ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದರು.

7 ಬಾರಿ ಶಾಸಕನಾಗಿ ಗೆದ್ದರೂ ಸಚಿವ ಸ್ಥಾನ ನೀಡಿಲ್ಲವೆಂದು ಒಳಗೊಳಗೆ ಬಿಜೆಪಿ ನಾಯಕರ ವಿರುದ್ಧ ಕತ್ತಿ ಮಸೆಯುತ್ತಿದ್ದ ಉಮೇಶ್ ಕತ್ತಿ ಅವರ ಈ ಹೇಳಿಕೆ ನೋಡಿದರೆ, ಮತ್ತೆ ಮೂವರು ಸಚಿವರಾಗಲಿದ್ದಾರೆ. ಮೂವರಲ್ಲಿ ಬಾಲಚಂದ್ರ ಜಾರಕಿಹೊಳಿ ಮತ್ತು ಕತ್ತಿಗೆ ಸಚಿವ ಸ್ಥಾನ ಪಕ್ಕಾ ಆದಂತಾಗಿದೆ.

ಆದ್ರೆ, ಇನ್ನುಳಿದ ಒಂದು ಸಚಿವ ಸ್ಥಾನ ಯಾರಿಗೆ ಎನ್ನುವುದು ಮಾತ್ರ ಭಾರೀ ಕುತೂಹಲ ಮೂಡಿಸಿದೆ. ಚಿತ್ರದರ್ಗದ ಚಂದ್ರಪ್ಪ ಹಾಗೂ ರೇಣುಕಾಚಾರ್ಯ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಬಿಜೆಪಿ ಉನ್ನತ ಮೂಲಗಳಿಂದ ಬಂದ ಪ್ರಕಾರ, ಉಳಿದಿರುವ ಒಂದು ಸಚಿವ ಸ್ಥಾನವನ್ನು ಚಂದ್ರಪ್ಪಗೆ ಒಲಿಯುವ ಸಾಧ್ಯತೆಗಳು ಹೆಚ್ಚಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಲಲಿತಮ್ಮ
ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?