
ಬೆಂಗಳೂರು[ಅ.25] ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ, ಮಾಜಿ ಡಾನ್ ಮುತ್ತಪ್ಪ ರೈ ಆಯುಧ ಪೂಜೆ ವಿಚಾರಕ್ಕೆ ಸಂಬಂಧಿಸಿ ಸ್ಟೇಶನ್ ಮೆಟ್ಟಿಲು ಏರಿ ಬಂದಿದ್ದರು. ಇದೀಗ ಮುತ್ತಪ್ಪ ರೈ ವಿರುದ್ದ ಡಿಜಿ ನೀಲಮಣಿ ರಾಜುಗೆ ದೂರು
ಡಿಜಿ ಜೊತೆಗೆ ಗೃಹಕಾರ್ಯದರ್ಶಿ ಹಾಗೂ ಮುಖ್ಯಕಾರ್ಯದರ್ಶಿಗೂ ದೂರು ನೀಡಲಾಗಿದೆ. ವಕೀಲರೊಬ್ಬರು ರೈ ವಿರುದ್ಧ ದೂರು ನೀಡಿದ್ದಾರೆ. ಕೇವಲ ಅಂಗರಕ್ಷಕರು ಮತ್ತು ಸೆಕ್ಯೂರೊಟಿ ಏಜೆನ್ಸಿ ಮೇಲೆ ಮಾತ್ರ ದೂರು ದಾಖಲು ಮಾಡಲಾಗಿದೆ. ಆದರೆ ರೈ ವಿರುದ್ಧ ಸಿಸಿಬಿ ಯಾವುದೆ ಎಫ್.ಐ.ಆರ್ ದಾಖಲು ಮಾಡಿಲ್ಲ. ಪ್ರಕರಣದಲ್ಲಿ ರೈ ಕಾನೂನು ಉಲ್ಲಂಘನೆ ಮಾಡಿರೋದು ಸ್ಪಷ್ಟವಾಗಿದೆ ಹಾಗಾಗಿ ವಿಚಾರಣೆ ನಡೆಸಬೇಕು ಎಂದು ಕೇಳಿಕೊಳ್ಳಲಾಗಿದೆ.
ಆಯುಧ ಪೂಜೆಯಂದು ಮುತ್ತಪ್ಪ ರೈಗೆ ಅಪರಿಚಿತ ತಂದ ಆಪತ್ತು: ಯಾರವರು?
ರೈ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ 3,7 ಹಾಗೂ ಐಪಿಸಿ 120(ಬಿ), 506 ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಇನ್ನು ರೈ ಮೇಲೆ ಕೋಕಾ ಕಾಯ್ದೆನ್ನು ಹೇರಬೇಕೆಂದು ದೂರು ನೀಡಿರುವ ವಕೀಲರಾದ ಜಗದೀಶ್ ಮನವಿ ಮಾಡಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ