
ಬೆಂಗಳೂರು(ಅ.9): ಖ್ಯಾತ ಸುಗಂಧಾ ದ್ರವ್ಯ ತಯಾರಕಿ ಮೋನಿಕಾ ಹತ್ಯೆ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್ ಸಿಕ್ಕಿದೆ. ಮೋನಿಕಾಳನ್ನು ಕೊಲೆ ಮಾಡಿದ್ದ ಹಂತಕರ ಪೈಕಿ ಒಬ್ಬನನ್ನು ಗೋವಾ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಇನ್ನು ಓರ್ವ ಆರೋಪಿಯನ್ನು ಗೋವಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದ್ದು ಆತನ ಹಿನ್ನೆಲೆ ಇನ್ನು ಗೊತ್ತಾಗಿಲ್ಲ. ಇನ್ನು ಆತನನ್ನು ರಹಸ್ಯ ಸ್ಥಳದಲ್ಲಿ ಆತನ ವಿಚಾರಣೆಯನ್ನು ಗೋವಾ ಪೊಲೀಸರು ನಡೆಸುತ್ತಿದ್ದಾರೆ.
ಮೋನಿಕಾ ಅವರನ್ನು ಕೊಲೆ ಮಾಡಿದ ಆರೋಪಿಗಳು ಕೊಲೆ ನಡೆದ ದಿನ ರಾತ್ರಿ ಆರೋಪಿಗಳು ಬೆಂಗಳೂರಿಗೆ ಬಂದಿದ್ದರು ಎಂಬುದು ಧೃಡ ಪಡ್ಡಿದೆ. ಯಾಕಂದರೆ ಅದೇ ದಿನ ರಾತ್ರಿ ಮೋನಿಕಾಳ ಎಟಿಎಂ ಬೆಂಗಳೂರಿನಲ್ಲಿ ಬಳಕೆಯಾಗಿದ್ದು ಈ ಸಿಸಿಟಿವಿ ದೃಶ್ಯಾವಳಿಗಳನ್ನು ಗೋವಾ ಪೊಲೀಸರು ಪಡೆದಿದ್ದಾರೆ. ಅದರಲ್ಲಿ ಇಬ್ಬರು ಆರೋಪಿಗಳ ಚಹರೆ ಸಹ ಪತ್ತೆಯಾಗಿದ್ದು ಈ ಸಿಸಿಟಿವಿ ದೃಶ್ಯಾವಳಿ ಆಧಾರದ ಮೇಲೆಯೇ ಆರೋಪಿಯನ್ನು ಬಂಧಿಸಲಾಗಿದೆ. ಇನ್ನು ಗೋವಾ ಪೊಲೀಸರ ತನಿಖೆಗೆ ಬೆಂಗಳೂರು ಪೊಲೀಸರು ಸಹ ಕೈ ಜೋಡಿಸಿದ್ದು ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.