ಜಮ್ಮು ಕಾಶ್ಮೀರದಲ್ಲಿ ಕಲ್ಲು ತೂರಾಟ : ಪ್ರವಾಸಿಗನ ಹತ್ಯೆ

Published : May 08, 2018, 12:32 PM IST
ಜಮ್ಮು ಕಾಶ್ಮೀರದಲ್ಲಿ ಕಲ್ಲು ತೂರಾಟ : ಪ್ರವಾಸಿಗನ ಹತ್ಯೆ

ಸಾರಾಂಶ

ಜಮ್ಮು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳ ಅಟ್ಟಹಾಸ ಮುಂದುವರಿದಿದೆ. ಇಂದು ನಡೆದ ಕಲ್ಲು ತೂರಾಟಕ್ಕೆ ತಮಿಳುನಾಡು ಮೂಲದ ಪ್ರವಾಸಿಗರೋರ್ವರು ಬಲಿಯಾಗಿದ್ದಾರೆ. ಅಲ್ಲದೇ ಇದೇ ವೇಳೆ ಅವರ ಕುಟುಂಬದ ಇಬ್ಬರು ಸದಸ್ಯರು ಗಾಯಗೊಂಡಿದ್ದಾರೆ. 

ಶ್ರೀನಗರ : ಜಮ್ಮು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳ ಅಟ್ಟಹಾಸ ಮುಂದುವರಿದಿದೆ.  ಸೋಮವಾರ ನಡೆದ ಕಲ್ಲು ತೂರಾಟಕ್ಕೆ ತಮಿಳುನಾಡು ಮೂಲದ ಪ್ರವಾಸಿಗರೋರ್ವರು ಬಲಿಯಾಗಿದ್ದಾರೆ. 

ಅಲ್ಲದೇ ಇದೇ ವೇಳೆ ಅವರ ಕುಟುಂಬದ ಇಬ್ಬರು ಸದಸ್ಯರು ಗಾಯಗೊಂಡಿದ್ದರು.  ಶ್ರೀನಗರ ಹಾಗೂ ಗುಲ್ ಮಾರ್ಗ್ ಪ್ರದೇಶದಲ್ಲಿ ಚೆನ್ನೈ ಮೂಲದ ಪ್ರವಾಸಿಗರ ಕುಟುಂಬ ತೆರಳುತ್ತಿದ್ದ ಕ್ಯಾಬ್ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು.  

ಮೃತರನ್ನು ಆರ್ ತಿರುಮಣಿ ಎಂದು ಗುರುತಿಸಲಾಗಿದೆ.  ಕಲ್ಲು ತೂರಾಟದ ವೇಳೆ ತಿರುಮಣಿ ತಲೆಗೆ  ಗಂಭೀರವಾಗಿ ಗಾಯವಾಗಿದ್ದು, ಈ ವೇಳೆ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.   ಚಿಕಿತ್ಸೆ ಫಲಿಸದೇ ತಿರುಮಣಿ ಮೃತಪಟ್ಟಿದ್ದಾರೆ. ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಮೃತರ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.

ಐವರು ಹಿಜ್ ಬುಲ್  ಉಗ್ರರ  ಎನ್ಕೌಂಟರ್  ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಪ್ರತ್ಯೇಕತಾವಾದಿಗಳ ಗುಂಪು ಪ್ರವಾಸಿಗರ ಮೇಲೆ ಕಲ್ಲು ತೂರಾಟ ನಡೆಸಿತ್ತು.  ಭಾನುವಾರ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್‌ನಲ್ಲಿ ಒಟ್ಟು ಐದು ಮಂದಿ ಉಗ್ರರು ಹತರಾಗಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Photos: 6 ವರ್ಷಗಳ ಬಳಿಕ ಮುಂಡಗೋಡಿಗೆ ಆಗಮಿಸಿದ ಟಿಬೆಟಿಯನ್ ಧರ್ಮಗುರು ದಲಾಯಿ ಲಾಮಾ!
Actress Assault Case: ಆರು ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ ಘೋಷಿಸಿದ ಕೇರಳ ಕೋರ್ಟ್‌