ಬೆಂಗ್ಳೂರು ಏರ್‌ಪೋರ್ಟಲ್ಲಿ ಬಾಂಬ್‌ ನಿಗ್ರಹ ವ್ಯವಸ್ಥೆ ಇಲ್ಲ!

Published : Apr 10, 2018, 07:46 AM ISTUpdated : Apr 14, 2018, 01:13 PM IST
ಬೆಂಗ್ಳೂರು ಏರ್‌ಪೋರ್ಟಲ್ಲಿ ಬಾಂಬ್‌ ನಿಗ್ರಹ ವ್ಯವಸ್ಥೆ ಇಲ್ಲ!

ಸಾರಾಂಶ

ದೇಶದ ಅತ್ಯುತ್ತಮ ವಿಮಾನ ನಿಲ್ದಾಣಗಳಲ್ಲೊಂದು ಎಂಬ ಹೆಗ್ಗಳಿಕೆ ಪಡೆದಿರುವ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್‌ ಪತ್ತೆ ಮತ್ತು ನಿಷ್ಕ್ರೀಯ ವ್ಯವಸ್ಥೆಯೇ ಇಲ್ಲ ಎಂಬ ಆತಂಕಕಾರಿ ಸಂಗತಿ ಬೆಳಕಿಗೆ ಬಂದಿದೆ.

ನವದೆಹಲಿ: ದೇಶದ ಅತ್ಯುತ್ತಮ ವಿಮಾನ ನಿಲ್ದಾಣಗಳಲ್ಲೊಂದು ಎಂಬ ಹೆಗ್ಗಳಿಕೆ ಪಡೆದಿರುವ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್‌ ಪತ್ತೆ ಮತ್ತು ನಿಷ್ಕ್ರೀಯ ವ್ಯವಸ್ಥೆಯೇ ಇಲ್ಲ ಎಂಬ ಆತಂಕಕಾರಿ ಸಂಗತಿ ಬೆಳಕಿಗೆ ಬಂದಿದೆ. ಬೆಂಗಳೂರೊಂದೇ ಅಲ್ಲ, ದೇಶದ ಬಹುತೇಕ ವಿಮಾನ ನಿಲ್ದಾಣಗಳಲ್ಲಿ ಈ ವ್ಯವಸ್ಥೆ ಕಾರ್ಯ ನಿರ್ವಹಿಸುತ್ತಿಲ್ಲ. ಕೇವಲ ದೆಹಲಿ, ಮುಂಬೈ, ಚೆನ್ನೈ, ಕೊಲ್ಕತ್ತಾ, ಕೊಚ್ಚಿ ಮತ್ತು ಹೈದರಾಬಾದ್‌ ವಿಮಾನ ನಿಲ್ದಾಣಗಳಲ್ಲಿ ಮಾತ್ರ ಈ ವ್ಯವಸ್ಥೆಯಿದೆ.

ಸಾರ್ವಜನಿಕ ಸ್ಥಳಗಳ ಭದ್ರತಾ ವ್ಯವಸ್ಥೆ ಬಗ್ಗೆ ದಿನೇದಿನೇ ಕಳಕಳಿ ಹೆಚ್ಚುತ್ತಿದ್ದರೂ ಅತಿಹೆಚ್ಚು ಭದ್ರತೆಯಿರಬೇಕಾದ ವಿಮಾನ ನಿಲ್ದಾಣಗಳಲ್ಲೇ ಈ ಬಗ್ಗೆ ದಿವ್ಯ ನಿರ್ಲಕ್ಷ್ಯ ವಹಿಸಲಾಗಿದೆ ಎಂಬ ವಿಚಾರ ಸಾರ್ವಜನಿಕ ವಲಯದಲ್ಲಿ ಆಘಾತ ಮೂಡಿಸಿದೆ.

ದೇಶದ 59 ಪ್ರಮುಖ ವಿಮಾನ ನಿಲ್ದಾಣಗಳಿಗೆ ಕೇಂದ್ರೀಯ ಔದ್ಯೋಗಿಕ ಭದ್ರತಾ ಪಡೆ (ಸಿಐಎಸ್‌ಎಫ್‌) ಭದ್ರತೆ ಒದಗಿಸುತ್ತಿದೆ. ಈ ವಿಮಾನ ನಿಲ್ದಾಣಗಳ ಪೈಕಿ ಎಷ್ಟುವಿಮಾನ ನಿಲ್ದಾಣಗಳಲ್ಲಿ ಬಾಂಬ್‌ ಪತ್ತೆ ಮತ್ತು ನಿಷ್ಕ್ರೀಯ ವ್ಯವಸ್ಥೆಯಿದೆ ಎಂದು ಇತ್ತೀಚೆಗೆ ಸಿಐಎಸ್‌ಎಫ್‌ ಪರಿಶೀಲನೆ ನಡೆಸಿತ್ತು. ಆಗ ಕೇವಲ ಆರು ವಿಮಾನ ನಿಲ್ದಾಣಗಳಲ್ಲಿ ಮಾತ್ರ ಪೂರ್ಣ ಪ್ರಮಾಣದ ಬಾಂಬ್‌ ಪತ್ತೆ ಮತ್ತು ನಿಷ್ಕ್ರೀಯ ವ್ಯವಸ್ಥೆಯಿದೆ, ಬೆಂಗಳೂರೂ ಸೇರಿದಂತೆ ಇನ್ನಿತರ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಈ ವ್ಯವಸ್ಥೆ ಕಾರ್ಯ ನಿರ್ವಹಿಸುತ್ತಿಲ್ಲ ಎಂಬುದು ತಿಳಿದು ಬಂದಿದೆ.

ಬಾಂಬ್‌ ಪತ್ತೆಹಚ್ಚಲು ಮತ್ತು ನಿಷ್ಕ್ರೀಯ ಗೊಳಿಸಲು ವಿಮಾನ ನಿಲ್ದಾಣಗಳಲ್ಲಿ 28 ಮಾದರಿಯ ಉಪಕರಣಗಳು ಬೇಕಾಗುತ್ತವೆ. ಇವುಗಳ ಪೈಕಿ ಒಂದು ಉಪಕರಣ ಇಲ್ಲದಿದ್ದರೂ ಬಾಂಬ್‌ ಪತ್ತೆ ಮತ್ತು ನಿಷ್ಕ್ರೀಯ ಸಾಧ್ಯವಿಲ್ಲ. ಈ ಬಗ್ಗೆ ನಾವು ವಿಮಾನ ನಿಲ್ದಾಣ ಪ್ರಾಧಿಕಾರ ಮತ್ತು ನಾಗರಿಕ ವಿಮಾನಯಾನ ಭದ್ರತಾ ಸಂಸ್ಥೆ (ಬಿಸಿಎಎಸ್‌)ಗೆ ಮಾಹಿತಿ ನೀಡಿದ್ದು, ಆದಷ್ಟುಬೇಗ ಎಲ್ಲಾ ಉಪಕರಣಗಳನ್ನು ಒದಗಿಸಲು ಮನವಿ ಮಾಡಿದ್ದೇವೆ ಎಂದು ಸಿಐಎಸ್‌ಎಫ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ.

ದೇಶದಲ್ಲಿರುವ 98 ವಿಮಾನ ನಿಲ್ದಾಣಗಳ ಪೈಕಿ 59 ವಿಮಾನ ನಿಲ್ದಾಣಗಳಿಗೆ ಸಿಐಎಸ್‌ಎಫ್‌ ಭದ್ರತೆ ನೀಡುತ್ತದೆ. ವಿಮಾನ ನಿಲ್ದಾಣ, ಬಂದರು, ವಿದ್ಯುತ್‌ ಉತ್ಪಾದನಾ ಘಟಕ, ಅಣುಸ್ಥಾವರ ಮುಂತಾದ ಸೂಕ್ಷ್ಮ ಸರ್ಕಾರಿ ಕಟ್ಟಡಗಳಿಗೆ ಭದ್ರತೆ ನೀಡುವುದಕ್ಕೆಂದೇ 1969ರಲ್ಲಿ ಸಿಐಎಸ್‌ಎಫ್‌ ಸ್ಥಾಪಿಸಲಾಗಿದೆ.

ಬಾಂಬ್‌ ನಿಷ್ಕ್ರೀಯ ವ್ಯವಸ್ಥೆಯಿರುವ ವಿಮಾನ ನಿಲ್ದಾಣಗಳು

1. ದೆಹಲಿ

2. ಮುಂಬೈ

3. ಚೆನ್ನೈ

4. ಕೊಲ್ಕತ್ತಾ

5. ಕೊಚ್ಚಿ

6. ಹೈದರಾಬಾದ್‌

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ