‘ಭಾವನೆಗಳ ಅಲೆಯಲ್ಲಿ ತೇಲದಿರಿ, ಸಂವಿಧಾನದ ಪ್ರಕಾರ ಸರ್ಕಾರ ನಡೆಸಿ’!

Published : Jul 26, 2018, 03:18 PM IST
‘ಭಾವನೆಗಳ ಅಲೆಯಲ್ಲಿ ತೇಲದಿರಿ, ಸಂವಿಧಾನದ ಪ್ರಕಾರ ಸರ್ಕಾರ ನಡೆಸಿ’!

ಸಾರಾಂಶ

ಸರ್ಕಾರ ನಡೆಯಬೇಕಿರುವುದು ಸಂವಿಧಾನದ ಆಧಾರದ ಮೇಲೆ ಎಐಎಂಐಎಂ ಮುಖ್ಯಸ್ಥ ಅಸದಿದ್ದೀನ್ ಒವೈಸಿ ಹೇಳಿಕೆ ಕಾನೂನು ಮತ್ತು ನಿಯಮಗಳೇ ಸರ್ಕಾರಕ್ಕೆ ಆಧಾರ ಭಾವನೆಗಳ ಆಧಾರದ ಮೇಲೆ ನಡೆದರೆ ಅರಾಜಕತೆ

ಹೈದರಾಬಾದ್(ಜು.25): ಭಾರತದಲ್ಲಿ ಸರ್ಕಾರಗಳು ಸಂವಿಧಾನ, ಕಾನೂನು ಮತ್ತು ನಿಯಮಗಳ ಆಧಾರದ ಮೇಲೆ ಕಾರ್ಯ ನಡೆಸಬೇಕೆ ಹೊರತು, ಅಲ್ಪ ಸಂಖ್ಯಾತ, ಬಹು ಸಂಖ್ಯಾತ ಎಂಬ ಭಾವನೆಗಳ ಆಧಾರದ ಮೇಲಲ್ಲ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಒವೈಸಿ ಹೇಳಿದ್ದಾರೆ.

ಭಾರತ ಸರ್ಕಾರ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಲು ಅವಶ್ಯಕತೆಯಿರುವುದು ಸಂವಿಧಾನ ಕಾನೂನು ಮತ್ತು ನಿಯಮಗಳು. ಆದರೆ ಅಲ್ಪಸಂಖ್ಯಾತ, ಬಹುಸಂಖ್ಯಾತ ಎಂಬ ಭಾವನೆಗಳ ಮೇಲೆ ಸರ್ಕಾರ ನಡೆಸಿದರೆ ಅರಾಜಕತೆ ಉಂಟಾಗುತ್ತದೆ ಎಂದು ಒವೈಸಿ ಅಭಿಪ್ರಾಯಪಟ್ಟಿದ್ದಾರೆ.

ಸಂವಿಧಾನದ 21ನೇ ವಿಧಿ, ಮಾನವೀಯತೆಯನ್ನು ಸಾರುತ್ತದೆ. ಅದರ ಪ್ರಕಾರ ಪ್ರತಿಯೊಬ್ಬರಿಗೂ ಜೀವಿಸುವ ಹಕ್ಕಿದೆ. ಇದನ್ನು ಸರ್ಕಾರಗಳು ಅರ್ಥ ಮಾಡಿಕೊಳ್ಳಬೇಕು ಎಂದು ಒವೈಸಿ ಟ್ವೀಟ್ ಮಾಡಿದ್ದಾರೆ. ಮನುಷ್ಯರು ಮತ್ತು ಹಸುಗಳು ನನಗೆ ಸಮಾನ ಮಹತ್ವ ಎಂದು ಉತ್ತರ ಪ್ರಪದೇಶ ಸಿಎಂ ಯೋಗಿ ಆದಿತ್ಯನಾಥ್  ಹೇಳಿಕೆ ಉಲ್ಲೇಖಿಸಿ ಒವೈಸಿ ಈ ಹೇಳಿಕೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Explainer: ವಿಶ್ವದ ಅತಿದೊಡ್ಡ ಏರ್‌ಲೈನ್ಸ್‌ ಸ್ಮಶಾನವಾದ ಭಾರತ, ದೇಶದಲ್ಲಿ ವಿಮಾನ ಕಂಪನಿ ಬದುಕೋದು ಯಾಕೆ ಕಷ್ಟ?
ರತನ್ ಟಾಟಾ ಮಲತಾಯಿ, ಲ್ಯಾಕ್‌ಮೆ ಫ್ಯಾಶನ್ ಸಂಸ್ಥಾಪಕಿ ಸೈಮನ್ ಟಾಟಾ ನಿಧನ