ರಜನಿ ರಾಜಕೀಯ ಪ್ರವೇಶಕ್ಕೆ ಟಿಟಿವಿ ದಿನಕರನ್ ವ್ಯಂಗ್ಯ..

Published : Dec 31, 2017, 01:52 PM ISTUpdated : Apr 11, 2018, 01:09 PM IST
ರಜನಿ ರಾಜಕೀಯ ಪ್ರವೇಶಕ್ಕೆ ಟಿಟಿವಿ ದಿನಕರನ್ ವ್ಯಂಗ್ಯ..

ಸಾರಾಂಶ

ತಮಿಳುನಾಡಿನಲ್ಲಿ ಒಬ್ಬರೇ ಅಮ್ಮ, ಒಬ್ಬರೇ ಎಂಜಿಆರ್ ಅವರ ಸ್ಥಾನಕ್ಕೆ ಇನ್ಯಾರೂ ಕೂಡ ಬರಲು ಸಾಧ್ಯವಿಲ್ಲ ಎಂದು ಟಿಟಿವಿ ದಿನಕರನ್ ಕೂಡ ರಜನಿ ರಾಜಕೀಯ ಪ್ರವೇಶದ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದಾರೆ.

ಚೆನ್ನೈ(ಡಿ.31): ತಮಿಳುನಾಡಿನಲ್ಲಿ ರಜನಿಕಾಂತ್ ರಾಜಕೀಯ ಆರಂಭವಾಗಿದೆ. ಇಂದು ಹೊಸ ಪಕ್ಷ ಘೋಷಣೆ ಮಾಡುವ ಮೂಲಕ ರಜನಿಕಾಂತ್ ಅಧಿಕೃತವಾಗಿ ರಾಜಕೀಯ ಪ್ರವೇಶಿಸಿದ್ದಾರೆ.

ಒಂದೆಡೆ ರಜನಿ ಅಭಿಮಾನಿಗಳು ಈ ಬಗ್ಗೆ ಹರ್ಷ ವ್ಯಕ್ತಪಡಿಸಿ ಸಂಭ್ರಮಾಚರಣೆ ಮಾಡುತ್ತಿದ್ದರೆ ಇನ್ನೊಂದೆಡೆ ಟೀಕೆಗಳು ಕೇಳಿ ಬರುತ್ತಿದೆ. ಸುಬ್ರಮಣಿಯನ್ ಸ್ವಾಮಿ ರಜನಿಕಾಂತ್ ಓರ್ವ ಅನಕ್ಷರಸ್ಥ, ಗೊತ್ತುಗುರಿ ಇಲ್ಲದ ವ್ಯಕ್ತಿ ಎಂದ ಬೆನ್ನಲ್ಲೇ ಇತ್ತ ಟಿಟಿವಿ ದಿನಕರನ್ ಕೂಡ ರಜನಿ ರಾಜಕೀಯ ಪ್ರವೇಶದ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿನಲ್ಲಿ ಒಬ್ಬರೇ ಅಮ್ಮ, ಒಬ್ಬರೇ ಎಂಜಿಆರ್ ಅವರ ಸ್ಥಾನಕ್ಕೆ ಇನ್ಯಾರೂ ಕೂಡ ಬರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಅವರೊಂದಿಗೆ ಯಾರನ್ನು ಹೋಲಿಕೆ ಮಾಡಲು ಸಾಧ್ಯವಿಲ್ಲ ಎನ್ನುವ ಮೂಲಕ ರಜನಿ ರಾಜಕೀಯ ಪ್ರವೇಶವನ್ನು ವ್ಯಂಗ್ಯ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೇಮಿಂಗ್ ಕ್ರಿಯೇಟರ್ ಫೆರಾರಿ ಕಾರು ಅಪಘಾತದಲ್ಲಿ ಸಾವು, ಮೊಬೈಲ್‌ನಲ್ಲಿ ಭೀಕರ ದೃಶ್ಯ ಸೆರೆ
Bengaluru: ಯಲಹಂಕದಲ್ಲಿ ನಿರ್ಮಾಣವಾಗಲಿದೆ ಭಾರತದ ಮೊಟ್ಟಮೊದಲ, ಚೀನಾ ಸ್ಟೈಲ್‌ನ ಎತ್ತರಿಸಿದ ರೈಲ್ವೆ ಟರ್ಮಿನಲ್‌!