ನಿಲ್ಲಲು ಶಕ್ತಿ ಇದ್ರೆ ಮಾತ್ರ ಶಬರಿಮಲೆ, ಮಹಿಳೆಯರಿಗೆ ಈ ಸುದ್ದಿ ಪ್ರಮುಖ

Published : Oct 01, 2018, 10:34 PM IST
ನಿಲ್ಲಲು ಶಕ್ತಿ ಇದ್ರೆ ಮಾತ್ರ ಶಬರಿಮಲೆ, ಮಹಿಳೆಯರಿಗೆ ಈ ಸುದ್ದಿ ಪ್ರಮುಖ

ಸಾರಾಂಶ

ಶಬರಿಮಲೆ ದೇವಾಲಯ ಪ್ರವೇಶವನ್ನು ಸುಪ್ರೀಂ ಕೋರ್ಟ್ ಮಹಿಳೆಯರಿಗೆ ಮುಕ್ತ ಮಾಡಿದ್ದು ಹಳೆ ಸುದ್ದಿ. ಆದರೆ ಈಗ ಅದಕ್ಕೆ ಸಂಬಂಧಿಸಿದ ಇನ್ನೊಂದು ಸುದ್ದಿ ಹೊರಬಿದ್ದಿದೆ. ಇದನ್ನು ಮಹಿಳೆಯರು ಹೇಗೆ ಸ್ವೀಕಾರ ಮಾಡುತ್ತಾರೆ ಕಾದು ನೋಡಬೇಕಿದೆ.

ತಿರುವನಂತಪುರ [ಅ.1] ಶಬರಿಮಲೆ ದೇವಾಲಯಕ್ಕೆ ಭೇಟಿ ನೀಡುವ ಮಹಿಳೆಯರಿಗೆ ಪ್ರತ್ಯೇಕ ಸರತಿ ಸಾಲು ವ್ಯವಸ್ಥೆ ಮಾಡುವುದು ಅಪ್ರಾಯೋಗಿಕ ಎಂದು ಕೇರಳ ಸರ್ಕಾರ ಹೇಳಿದೆ. ಈ ಮೂಲಕ ಒಂದು ಅರ್ಥದಲ್ಲಿ ಸಮಾನತೆಯನ್ನೇ ಮೆರೆದಿದೆ.

ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಅಯ್ಯಪ್ಪ ದೇವಾಲಯಕ್ಕೆ ಭೇಟಿ ನೀಡುವ ಮಹಿಳೆಯರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸುವುದಕ್ಕೆ ಸರ್ಕಾರ ನಿರ್ಧರಿಸಿದೆ. ಆದರೆ ದೇವಾಲಯದಲ್ಲಿ ಮಹಿಳೆಯರಿಗೆಂದೇ ಪ್ರತ್ಯೇಕ ಸರತಿ ಸಾಲು ವ್ಯವಸ್ಥೆ ಮಾಡುವುದು ಅಪ್ರಾಯೋಗಿಕ ಎಂದು ಹೇಳಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಸಭೆ ನಡೆಯಿತು. ದೇವಾಲಯಕ್ಕೆ ಭೇಟಿ ನೀಡುವವರು 8-10 ಗಂಟೆಗಳ ವರೆಗೆ ನಿಲ್ಲಬೇಕಾಗುತ್ತದೆ, ಇದು ಮಹಿಳೆಯರಿಗೂ ಅನ್ವಯವಾಗಲಿದೆ. 8-10 ಗಂಟೆಗಳು ಸರತಿ ಸಾಲಿನಲ್ಲಿ ನಿಲ್ಲುವ ತಾಳ್ಮೆ ಇರುವವರಷ್ಟೇ ಬನ್ನಿ ಎಂದು ದೇವಸ್ವಂ ಸಚಿವ ಸುರೇಂದ್ರನ್ ಹೇಳಿದ್ದಾರೆ.

ಮಹಿಳೆಯರೊಂದಿಗೆ ಕುಟುಂಬದ ಪುರುಷ ಸದಸ್ಯರೂ ಇರುತ್ತಾರೆ. ಆದರೆ ಮಹಿಳೆಯರಿಗೆಂದೇ ಪ್ರತ್ಯೇಕ ಸರತಿ ಸಾಲು ಮಾಡಿದರೆ ಆ ಮಹಿಳೆಯರು ಕುಟುಂಬದ ಬೇರೆ ಸದಸ್ಯರಿಂದ ಪ್ರತ್ಯೇಕವಾಗಿ ನಿಲ್ಲಬೇಕಾಗುತ್ತದೆ. ಆದರೆ ಮಹಿಳೆಯರಿಗಾಗಿ ಪ್ರತ್ಯೇಕ ಶೌಚಾಲಯ, ಸ್ನಾನ ಘಟ್ಟಗಳ ವ್ಯವಸ್ಥೆ ಮಾಡಲಾಗುತ್ತದೆ  ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಬಸ್ 3 ಕಾರುಗಳ ಮಧ್ಯೆ ಸರಣಿ ಅಪಘಾತ : ನಾಲ್ವರು ಬೆಂಕಿಗಾಹುತಿ
ಕೇಂದ್ರ, ಮೋದಿ ಮಾಡಿದ್ದೆಲ್ಲ ತಪ್ಪು ಎನ್ನಲಾಗದು, Vote Chori ಆರೋಪದಿಂದ ಕಾಂಗ್ರೆಸ್‌ನ ನೈತಿಕತೆ ಕುಸಿತ!