ಇದು ಮಣಿಪಾಲ ಕೆಎಂಸಿ ಆಸ್ಪತ್ರೆಯ ಸಾಧನೆ

Published : Feb 02, 2018, 08:07 AM ISTUpdated : Apr 11, 2018, 01:12 PM IST
ಇದು ಮಣಿಪಾಲ ಕೆಎಂಸಿ ಆಸ್ಪತ್ರೆಯ ಸಾಧನೆ

ಸಾರಾಂಶ

ಹುಟ್ಟುವಾಗಲೇ ಹೃದಯದ ತೊಂದರೆಯಿಂದ ಬಳಲುತ್ತಿದ್ದ 11 ದಿನದ ಹಸುಳೆಗೆ ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಈವರೆಗೆ ಮುಂಬೈ, ಬೆಂಗಳೂರಿನಂಥ ಮಹಾನಗರಗಳಲ್ಲಿ ಮಾತ್ರ ನಡೆಸಲಾಗುತ್ತಿದ್ದ ಈ ಶಸ್ತ್ರಚಿಕಿತ್ಸೆ ಮಣಿಪಾಲ ದಲ್ಲಿ ನಡೆದಿದ್ದು ಇದೇ ಮೊದಲು.

ಮಣಿಪಾಲ: ಹುಟ್ಟುವಾಗಲೇ ಹೃದಯದ ತೊಂದರೆಯಿಂದ ಬಳಲುತ್ತಿದ್ದ 11 ದಿನದ ಹಸುಳೆಗೆ ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಈವರೆಗೆ ಮುಂಬೈ, ಬೆಂಗಳೂರಿನಂಥ ಮಹಾನಗರಗಳಲ್ಲಿ ಮಾತ್ರ ನಡೆಸಲಾಗುತ್ತಿದ್ದ ಈ ಶಸ್ತ್ರಚಿಕಿತ್ಸೆ ಮಣಿಪಾಲ ದಲ್ಲಿ ನಡೆದಿದ್ದು ಇದೇ ಮೊದಲು.

ಬ್ರಹ್ಮಾವರದ ಹರೀಶ್ ಮತ್ತು ಪೂರ್ಣಿಮಾ ದಂಪತಿಯ ಈ ಮಗು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಜನಿಸಿದ್ದು, ಅಳುವಾಗ ಮೈಯೆಲ್ಲಾ ನೀಲಿ ಬಣ್ಣಕ್ಕೆ ತಿರುಗುತಿತ್ತು ಮತ್ತು ಉಸಿರಾಟಕ್ಕೆ ತೊಂದರೆಪಡುತ್ತಿತ್ತು. ಅಲ್ಲಿನ ವೈದ್ಯರು ಒಂದು ದಿನದ ಈ ಮಗುವನ್ನು ಮಣಿಪಾಲ ಆಸ್ಪತ್ರೆಗೆ ಕಳುಹಿಸಿದ್ದರು. ಮಗುವಿನ ಹೃದಯ ನಾಳಗಳು ಸ್ಥಾನ ಪಲ್ಲಟಗೊಂಡಿರುವುದನ್ನು 24 ಗಂಟೆಗಳಲ್ಲೇ ಪತ್ತೆಹಚ್ಚಿದ ಕೆಎಂಸಿ ವೈದ್ಯರು ಕೂಡಲೇ ಚಿಕಿತ್ಸೆ ಆರಂಭಿಸಿದ್ದರು.

ಈ ಮಗುವನ್ನು ಬೆಂಗಳೂರಿಗೆ ಕಳುಹಿಸಲು ಸಿದ್ಧತೆಗಳನ್ನು ನಡೆಸುತ್ತಿರು ವಾಗಲೇ ಕೆಎಂಸಿಗೆ ನೂತನ ಹೃದಯ ಶಸ್ತ್ರಚಿಕಿತ್ಸಕರಾಗಿ ಸೇರಿದ ಡಾ.ಅರವಿಂದ ಬಿಷ್ಣೋಯಿ ಅವರು ಮಗುವಿನ ಶಸ್ತ್ರಚಿಕಿತ್ಸೆಯ ಹೊಣೆಯನ್ನು ಹೊತ್ತು ಜ.23ರಂದು ಮಗುವಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಈಗ ಮಗು ಸಂಪೂರ್ಣವಾಗಿ ಚೇತರಿ ಸಿಕೊಂಡಿದ್ದು, ಗುರುವಾರ ಆಸ್ಪತ್ರೆ ಯಿಂದ ಬಿಡುಗಡೆಗೊಂಡಿದೆ.

ಇಂತಹ ತೊಂದರೆ ಇರುವ ಮಗುವನ್ನು ಹುಟ್ಟಿದ 15 ದಿನಗಳೊಗೆ ಶಸ್ತ್ರಚಿಕಿತ್ಸೆಗೊಳಪಡಿಸಲೇಬೇಕು, ಇಲ್ಲದಿದ್ದಲ್ಲಿ ತಿಂಗಳಲ್ಲಿ ಮಗು ಸಾವಿಗೀಡಾಗುತ್ತದೆ. ಅಪರೂಪದ ಪ್ರಕರಣ ಗಳಲ್ಲಿ ಮಾತ್ರ ಕೆಲ ಮಕ್ಕಳು ಗರಿಷ್ಠ 1 ವರ್ಷದವರೆಗೆ ಬದುಕುಳಿದ ಉದಾಹರಣೆಗಳಿವೆ ಎಂದು ಡಾ.ಅರವಿಂದ ಬಿಷ್ಣೋಯಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ