ಕಾಂಗ್ರೆಸ್ ಅಭ್ಯರ್ಥಿಗೆ ಬಿಜೆಪಿಯಿಂದ ಗಾಳ : ಕಾಂಗ್ರೆಸ್’ಗೆ ಆಪರೇಷನ್ ಕಮಲ ಭೀತಿ

Published : Mar 02, 2018, 11:39 AM ISTUpdated : Apr 11, 2018, 12:48 PM IST
ಕಾಂಗ್ರೆಸ್ ಅಭ್ಯರ್ಥಿಗೆ ಬಿಜೆಪಿಯಿಂದ ಗಾಳ : ಕಾಂಗ್ರೆಸ್’ಗೆ ಆಪರೇಷನ್ ಕಮಲ ಭೀತಿ

ಸಾರಾಂಶ

ಮೂರು ಬಾರಿ ಶಾಸಕರಾಗಿರುವ ‘ಹುಮ್ನಾಬಾದ್ ಗೌಡ’ ಎಂದೇ ಕರೆಸಿಕೊಳ್ಳುವ ರಾಜಶೇಖರ ಪಾಟೀಲ್ ಮತ್ತೊಮ್ಮೆ ಕಾಂಗ್ರೆಸ್ ಪಕ್ಷದಿಂದ ಅದೃಷ್ಟ ಪರೀಕ್ಷೆ ಇಳಿಯುವ ಸಂಭವವಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಚಿವ ಸ್ಥಾನ ವಂಚಿತರಾಗಿರುವ ರಾಜಶೇಖರ ಪಾಟೀಲ್ ಅವರಿಗೆ ಬಿಜೆಪಿ ಗಾಳ ಹಾಕಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು : ಮೂರು ಬಾರಿ ಶಾಸಕರಾಗಿರುವ ‘ಹುಮ್ನಾಬಾದ್ ಗೌಡ’ ಎಂದೇ ಕರೆಸಿಕೊಳ್ಳುವ ರಾಜಶೇಖರ ಪಾಟೀಲ್ ಮತ್ತೊಮ್ಮೆ ಕಾಂಗ್ರೆಸ್ ಪಕ್ಷದಿಂದ ಅದೃಷ್ಟ ಪರೀಕ್ಷೆ ಇಳಿಯುವ ಸಂಭವವಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಚಿವ ಸ್ಥಾನ ವಂಚಿತರಾಗಿರುವ ರಾಜಶೇಖರ ಪಾಟೀಲ್ ಅವರಿಗೆ ಬಿಜೆಪಿ ಗಾಳ ಹಾಕಿದೆ ಎಂದು ಹೇಳಲಾಗುತ್ತಿದೆ.

ಬಿಜೆಪಿಯಿಂದ ಸುಭಾಷ್ ಕಲ್ಲೂರ್, ಪಕ್ಷದ ಉಪಾಧ್ಯಕ್ಷ ಶಿವಾನಂದ ಮಂಠಾಳಕರ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ರಾಜಶೇಖರ ಪಾಟೀಲ್ ಪಕ್ಷಾಂತರ ಗೊಂಡರೆ ಬಿಜೆಪಿ ಬಲ ವೃದ್ಧಿಯಾಗಲಿದ್ದು, ಕಣ ಚಿತ್ರಣ ಬದಲಾಗಲಿದೆ. ಕಳೆದ ಬಾರಿ ಈ ಕ್ಷೇತ್ರದಲ್ಲಿ ಜೆಡಿಎಸ್ ಎರಡನೇ ಸ್ಥಾನ ಪಡೆದಿತ್ತು.

ಜೆಡಿಎಸ್ ಮಾಜಿ ಅಧ್ಯಕ್ಷ ದಿವಂಗತ ಮೆರಾಜುದ್ದೀನ್ ಪಟೇಲ್ ಸೋದರ ನಸೀಮೊದ್ದೀನ್ ಪಟೇಲ್ ಅವರು ಆ ಪಕ್ಷದಿಂದ ಈ ಬಾರಿಯೂ ಸ್ಪರ್ಧೆಗಿಳಿಯುತ್ತಿದ್ದಾರೆ.

2013ರಲ್ಲಿ ಮೂರನೇ ಸ್ಥಾನ ಗಳಿಸಿದ್ದ ಬಿಎಸ್‌ಪಿ ಜತೆಗಿನ ಮೈತ್ರಿಯಿಂದ ಪಟೇಲ್ ಅವರಿಗೆ ಮತ್ತಷ್ಟು ಮತಗಳು ಒಲಿಯುವ ಸಾಧ್ಯತೆ ಇದೆ. ಇದರಿಂದ ಮತ ವಿಭಜನೆಯಾಗುವ ಸಾಧ್ಯತೆ ಇದ್ದು, ಕಾಂಗ್ರೆಸ್ ಪಕ್ಷಕ್ಕೆ ಆತಂಕಕಾರಿ. ಹುಮನಾಬಾದ್ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಡುವೆ ಈ ಬಾರಿ ತ್ರಿಕೋನ ಸ್ಪರ್ಧೆ ಕಂಡುಬರುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!