
ಅಯೋಧ್ಯೆ (ಅ.18): ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಮೋದಿ ಸರ್ಕಾರ ರಾಮಾಯಣ ಮ್ಯೂಸಿಯಂ ಕಟ್ಟಡ ನಿರ್ಮಾಣ ಮಾಡಲು ತಯಾರಿ ನಡೆಸಿದೆ.
ವಿವಾದಿತ ಅಯೋಧ್ಯೆಯ ರಾಮಜನ್ಮಭೂಮಿ- ಬಾಬ್ರಿ ಮಸೀದಿಯಿಂದ ಸುಮಾರು 15 ಕಿ.ಮೀ ದೂರದಲ್ಲಿ ರಾಮಾಯಣ ಮ್ಯೂಸಿಯಂ ಕಟ್ಟಡ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಯೋಜನೆ ಹಾಕಿದೆ.
ಈಗಾಗಲೇ 25 ಎಕರೆ ಭೂಮಿಯನ್ನು ಸರ್ಕಾರ ಮಂಜೂರು ಮಾಡಿದ್ದು, ಈ ಸ್ಥಳ ಪರಿಶೀಲನೆಗಾಗಿ ಇವತ್ತು ಕೇಂದ್ರ ಪ್ರವಾಸೋದ್ಯಮ ಸಚಿವ ಮಹೇಶ್ ಶರ್ಮಾ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ.
ಕೇಂದ್ರ ಸರ್ಕಾರ 225 ಕೋಟಿ ರೂಪಾಯಿಗೂ ಹೆಚ್ಚಿನ ಅನುದಾನ ನೀಡಿ ರಾಮಾಯಣ ಮ್ಯೂಸಿಯಂ ನಿರ್ಮಿಸಲು ಮುಂದಾಗಿದೆ. ಆದರೆ ಈ ರಾಮಾಯಣ ಮ್ಯೂಸಿಯಂಗೆ ವಿಪಕ್ಷಗಳು ಅಪಸ್ವರ ಎತ್ತಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.