ರಾಷ್ಟ್ರಪತಿಯನ್ನು ಭೇಟಿ ಮಾಡಿದ ಪ್ರತಿಪಕ್ಷಗಳ ನಿಯೋಗ; ಮಧ್ಯಪ್ರವೇಶಕ್ಕೆ ಒತ್ತಾಯ

Published : Apr 12, 2017, 11:38 AM ISTUpdated : Apr 11, 2018, 01:04 PM IST
ರಾಷ್ಟ್ರಪತಿಯನ್ನು ಭೇಟಿ ಮಾಡಿದ ಪ್ರತಿಪಕ್ಷಗಳ ನಿಯೋಗ; ಮಧ್ಯಪ್ರವೇಶಕ್ಕೆ ಒತ್ತಾಯ

ಸಾರಾಂಶ

13 ಮಂದಿಯನ್ನು ಒಳಗೊಂಡ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ನಿಯೋಗ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯನ್ನು ಭೇಟಿ ಮಾಡಿ ಇವಿಎಂ ವಿವಾದ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಎದ್ದಿರುವ ಹಿಂಸಾಚಾರ, ಕೇಂದ್ರೀಯ ಸಂಸ್ಥೆಗಳ ದುರ್ಬಳಕೆ ಬಗ್ಗೆ ವಿವರ ಸಲ್ಲಿಸಿದರು.

ನವದೆಹಲಿ (ಏ.12): 13 ಮಂದಿಯನ್ನು ಒಳಗೊಂಡ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ನಿಯೋಗ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯನ್ನು ಭೇಟಿ ಮಾಡಿ ಇವಿಎಂ ವಿವಾದ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಎದ್ದಿರುವ ಹಿಂಸಾಚಾರ, ಕೇಂದ್ರೀಯ ಸಂಸ್ಥೆಗಳ ದುರ್ಬಳಕೆ ಬಗ್ಗೆ ವಿವರ ಸಲ್ಲಿಸಿದರು.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ, ಹಾಗೂ ಹಿರಿಯ ನಾಯಕ ಗುಲಾಂ ನಬಿ ಅಜಾದ್ ವಿವರವಾದ ಮನವಿ ಪತ್ರ ಸಲ್ಲಿಸಿ ಈ ವಿಚಾರಗಳಲ್ಲಿ ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿದರು.

ದೇಶದಲ್ಲಿ ಅಭದ್ರತೆ ವಾತಾವರಣವಿದೆ.ರಾಜಸ್ಥಾನದ ಅಲ್ವಾರ್, ಜಾರ್ಖಂಡ್, ಗುಜರಾತ್, ಪುಣೆ, ದಾದ್ರಿ, ಜಮ್ಮು-ಕಾಶ್ಮೀರದಲ್ಲಿ ಹಿಂಸಾಚಾರ ಪ್ರಕರಣಗಳು ನಡೆದಿವೆ ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯಪಾಲರ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ಇತ್ತೀಚಿಗೆ ಚುನಾವಣೆ ನಡೆದ ಮಣಿಪುರ ಹಾಗೂ ಗೋವಾ ಇದಕ್ಕೆ ಸ್ಪಷ್ಟ ಉದಾಹರಣೆ ಎಂದು ಪ್ರತಿಪಕ್ಷಗಳ ನಿಯೋಗ ಹೇಳಿದೆ.

ಐತಿಹಾಸಿಕ ಶಿಕ್ಷಣ ಸಂಸ್ಥೆಗಳಾದ ನಲಂದಾ ವಿಶ್ವವಿದ್ಯಾಲಯ, ನೆಹರು ವಿವಿಯಲ್ಲಿ ಹಿಂಸಾಚಾರ, ಸಿಬಿಐ, ಇಡಿ, ಆದಾಯ ತೆರಿಗೆ ಇಲಾಖೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಮೆಮೋರೆಂಡಮ್ ನಲ್ಲಿ ತಿಳಿಸಲಾಗಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಶ್ ಸೋಲಿಸ್ತಾರಾ ರಣವೀರ್.. ಬ್ಲಾಕ್ ಬಸ್ಟರ್ 'KGF 2' ಬೀಟ್ ಮಾಡಲಿದ್ಯಾ ರಣವೀರ್ "ಧುರಂಧರ್..?
ಸಿಡ್ನಿಯ ಬೋಂಡಿ ಬೀಚ್‌ನಲ್ಲಿ 15 ಜನರ ಬಲಿ ಪಡೆದ ಯಹೂದಿ ಹಬ್ಬದ ಮೇಲಿನ ದಾಳಿಯ ಹಿಂದೆ ಪಾಕಿಸ್ತಾನಿ ಅಪ್ಪ ಮಗ