ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ಪದಚ್ಯುತಿಗೆ ಪ್ರಸ್ತಾಪ

Published : Apr 21, 2018, 07:28 AM IST
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ಪದಚ್ಯುತಿಗೆ ಪ್ರಸ್ತಾಪ

ಸಾರಾಂಶ

ಭಾರತದ ಇತಿಹಾಸದಲ್ಲೇ ಇದೇ ಮೊತ್ತ ಮೊದಲ ಬಾರಿಗೆ ಭಾರತದ ಮುಖ್ಯ ನ್ಯಾಯಾಧೀಶರ ವಿರುದ್ಧ ‘ಮಹಾಭಿಯೋಗ’ (ವಾಗ್ದಂಡನೆ) ನಿಲುವಳಿ ಮಂಡಿಸಲು ತೀರ್ಮಾನಿಸಿರುವ ಕಾಂಗ್ರೆಸ್ ಹಾಗೂ ಇತರ 6 ಪ್ರತಿಪಕ್ಷಗಳು, ಈ ಸಂಬಂಧ ರಾಜ್ಯಸಭೆ ಸಭಾಪತಿಗಳಿಗೆ ಶುಕ್ರವಾರ ನೋಟಿಸ್ ನೀಡಿದೆ.

ನವದೆಹಲಿ: ಭಾರತದ ಇತಿಹಾಸದಲ್ಲೇ ಇದೇ ಮೊತ್ತ ಮೊದಲ ಬಾರಿಗೆ ಭಾರತದ ಮುಖ್ಯ ನ್ಯಾಯಾಧೀಶರ ವಿರುದ್ಧ ‘ಮಹಾಭಿಯೋಗ’ (ವಾಗ್ದಂಡನೆ) ನಿಲುವಳಿ ಮಂಡಿಸಲು ತೀರ್ಮಾನಿಸಿರುವ ಕಾಂಗ್ರೆಸ್ ಹಾಗೂ ಇತರ 6 ಪ್ರತಿಪಕ್ಷಗಳು, ಈ ಸಂಬಂಧ ರಾಜ್ಯಸಭೆ ಸಭಾಪತಿಗಳಿಗೆ ಶುಕ್ರವಾರ ನೋಟಿಸ್ ನೀಡಿದೆ.

ನ್ಯಾ| ದೀಪಕ್ ಮಿಶ್ರಾ ವಿರುದ್ಧ 5 ಆರೋಪ ಹೊರಿಸಿರುವ ವಿಪಕ್ಷಗಳು, ಅವರ ವಿರುದ್ಧ ‘ದುರ್ನಡತೆ’ ಹಾಗೂ ‘ಅಧಿಕಾರ ದುರ್ಬಳಕೆ’ ಆರೋಪ ಹೊರಿಸಿವೆ. ಇದರೊಂದಿಗೆ ನ್ಯಾಯಾಂಗ ಹಾಗೂ ರಾಜಕೀಯ ಪಕ್ಷಗಳ ನಡುವೆ ಇದೇ ಮೊದಲ ಬಾರಿಗೆ ಕಂಡು ಕೇಳರಿಯದ ಸಂಘರ್ಷ ತಲೆದೋ

ರುವ ಸಾಧ್ಯತೆ ಇದೆ. ಗ್ಯಾಂಗ್‌ಸ್ಟರ್ ಸೊಹ್ರಾಬುದ್ದೀನ್ ಶೇಖ್ ಅನುಮಾನಾಸ್ಪದ ಎನ್ ಕೌಂಟರ್ ಪ್ರಕರಣದ ನ್ಯಾಯಾಧೀಶ ಬಿ.ಎಚ್. ಲೋಯಾ ಸಾವಿನ ತನಿಖೆಗೆ ಆದೇಶಿಸಲು ನ್ಯಾ| ಮಿಶ್ರಾ ನಿರಾಕರಿಸಿದ ಬೆನ್ನಲ್ಲೇ ವಾಗ್ದಂಡನೆಗೆ ಕಾಂಗ್ರೆಸ್ ಮುಂದಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಧ್ಯಪ್ರಾಚ್ಯ ಸಂಘರ್ಷ: ಕೇಂದ್ರದ ನಿಲುವಿಗೆ ರಾಹುಲ್ ಗಾಂಧಿ ಟೀಕೆ, ಪ್ರಧಾನಿ ಮೋದಿ ಬೆಂಬಲಕ್ಕೆ ನಿಂತ ಕಾಂಗ್ರೆಸ್ ಹಿರಿಯ ನಾಯಕರು!
ಹೋರ್ಮುಜ್ ಮುಕ್ತಗೊಳಿಸಲು ಟ್ರಂಪ್‌ 48 ತಾಸುಗಳ ಗಡುವು, ಒಪ್ಪದಿದ್ದರೆ ಇರಾನ್‌ಗೆ ನರಕದರ್ಶನ!