
ನವದೆಹಲಿ (ಡಿ.08): ಕೇಂದ್ರ ಸರ್ಕಾರದ ನೋಟು ನಿಷೇಧ ಕ್ರಮ ಖಂಡಿಸಿ ಖಂಡಿಸಿ ದೆಹಲಿಯಲ್ಲಿ ಪ್ರತಿಪಕ್ಷಗಳಿಂದ ಕರಾಳ ದಿನ ಆಚರಣೆ ಮಾಡಲಾಗುತ್ತಿದೆ.
ಕೇಂದ್ರ ಸರ್ಕಾರ ನೋಟ್ ನಿಷೇಧ ಮಾಡಿದ್ದರಿಂದಾಗಿ ಸಾಮಾನ್ಯ ಜನರು ಹಲವು ತೊಂದರೆ ಅನುಭವಿಸುತ್ತಿದ್ದಾರೆ. ಸರ್ಕಾರದ ಏಕಾಏಕಿ ಕ್ರಮದಿಂದಾಗಿ ಬಡಜನರ ನಿತ್ಯದ ವ್ಯವಹಾರಗಳು ನಿಂತಿವೆ ಎಂದು ಪ್ರತಿಪಕ್ಷಗಳು ಹೇಳಿವೆ.
ಚಳಿಗಾಲ ಅಧಿವೇಶನ ಆರಂಭಗೊಂಡು 17 ದಿನಗಳು ಕಳೆದರೂ ಕೂಡ ಪ್ರಧಾನಿ ಸಂಸತ್ತಿನಲ್ಲಿ ಯಾವುದೇ ಮಾತನಾಡಿಲ್ಲ. ಸರ್ಕಾರದ ಕ್ರಮದ ಕುರಿತು ಪ್ರಧಾನಿ ಮೋದಿ ಸಂಸತ್ತಿನಲ್ಲಿ ಉತ್ತರಿಸಬೇಕೆಂದು ಆಗ್ರಹಿಸಿ ದೆಹಲಿಯ ಸಂಸತ್ ಭವನ ಗಾಂಧಿ ಪ್ರತಿಮೆ ಎದುರು ರಾಹುಲ್ಗಾಂಧಿ ಮತ್ತು ವಿಪಕ್ಷಗಳ ಮುಖಂಡರು ಮುಖಕ್ಕೆ ಹಾಗೂ ಕೈಗಳಿಗೆ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.