ಮೈಸೂರಿನಲ್ಲಿ ಪುತ್ಥಳಿ ರಾಜಕೀಯ: ಸುತ್ತೂರು ಶ್ರೀಗಳ ಪ್ರತಿಮೆಗೆ ವಿರೋಧ

Published : Aug 27, 2017, 09:15 AM ISTUpdated : Apr 11, 2018, 12:47 PM IST
ಮೈಸೂರಿನಲ್ಲಿ ಪುತ್ಥಳಿ ರಾಜಕೀಯ: ಸುತ್ತೂರು ಶ್ರೀಗಳ ಪ್ರತಿಮೆಗೆ ವಿರೋಧ

ಸಾರಾಂಶ

ಮೈಸೂರು ಅರಮನೆ ದ್ವಾರದಲ್ಲಿ ಸರ್ಕಾರ ಸ್ಥಾಪಿಸಲು ಹೊರಟಿರುವ ಸುತ್ತೂರು ಶ್ರೀಗಳ ಪುತ್ಥಳಿಗೆ  ಅಪಸ್ವರ ಕೇಳಿಬಂದಿದೆ. ಇದೀಗ ಅದೇ ಸ್ಥಳದಲ್ಲಿ ಮೈಸೂರು ರಾಜ ವಂಶದ ಕೊನೆಯ ಕುಡಿ, ದಿವಂಗತ ಶ್ರೀಕಂಠದತ್ತ ಒಡೆಯರ್​ ಪ್ರತಿಮೆ ನಿರ್ಮಾಣ ಮಾಡುವಂತೆ ಒತ್ತಾಯ ಕೇಳಿಬಂದಿದೆ. ಈ ವಿಚಾರ ಈಗ ವಿವಾದಕ್ಕೀಡಾಗಿದೆ.

ಮೈಸೂರು: ಮೈಸೂರು ಅರಮನೆ ದ್ವಾರದಲ್ಲಿ ಸರ್ಕಾರ ಸ್ಥಾಪಿಸಲು ಹೊರಟಿರುವ ಸುತ್ತೂರು ಶ್ರೀಗಳ ಪುತ್ಥಳಿಗೆ  ಅಪಸ್ವರ ಕೇಳಿಬಂದಿದೆ. ಇದೀಗ ಅದೇ ಸ್ಥಳದಲ್ಲಿ ಮೈಸೂರು ರಾಜ ವಂಶದ ಕೊನೆಯ ಕುಡಿ, ದಿವಂಗತ ಶ್ರೀಕಂಠದತ್ತ ಒಡೆಯರ್​ ಪ್ರತಿಮೆ ನಿರ್ಮಾಣ ಮಾಡುವಂತೆ ಒತ್ತಾಯ ಕೇಳಿಬಂದಿದೆ. ಈ ವಿಚಾರ ಈಗ ವಿವಾದಕ್ಕೀಡಾಗಿದೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪುತ್ಥಳಿಗಳಿಗೇನೂ ಭರವಿಲ್ಲ. ಇಲ್ಲಿನ ಗಲ್ಲಿ ಗಲ್ಲಿಗಳಲ್ಲಿ ಹಲವು ಮಹಾನ್ ವ್ಯಕ್ತಿಗಳ ಪುತ್ಥಳಿಗಳು ಕಾಣ ಸಿಗುತ್ತವೆ. ಆದರೆ ಈಗ ರಾಜ್ಯ ಸರ್ಕಾರ ಮತ್ತೊಂದು ಪುತ್ಥಳಿ ನಿರ್ಮಾಣಕ್ಕೆ ಮುಂದಾಗಿದೆ. ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 102ನೇ ಜಯಂತಿ ನಿಮಿತ್ತ ರಾಜ್ಯ ಸರ್ಕಾರ 2 ಕೋಟಿ ರೂ. ವೆಚ್ಚದಲ್ಲಿ ಪುತ್ಥಳಿ ನಿರ್ಮಿಸಲು ತೀರ್ಮಾನಿಸಿದೆ.  ಅಂಬಾವಿಲಾಸ ಅರಮನೆ  ದಕ್ಷಿಣ ಭಾಗದ ದ್ವಾರದಲ್ಲಿ ಸುತ್ತೂರು ಜಗದ್ಗುರು ಡಾ.ಶಿವರಾತ್ರಿ ರಾಜೇಂದ್ರ ಸ್ವಾಮಿಗಳ ಪುತ್ಥಳಿ ನಿರ್ಮಾಣ ಮಾಡಲು ಸರ್ಕಾರ ಮುಂದಾಗಿದೆ.

ಆದರೆ, ಕೆಲವು ಸಂಘಟನೆಗಳು ಶ್ರೀಗಳ ಪುತ್ಥಳಿ ಇಲ್ಲಿ ಬೇಡ ಎಂದು ಕ್ಯಾತೆ ತೆಗೆದಿವೆ. ಅವುಗಳು  ಸುತ್ತೂರು ಶ್ರೀಗಳ ಪುತ್ಥಳಿ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಮೈಸೂರು ರಾಜ ವಂಶಸ್ಥ ಶ್ರೀಕಂಠದತ್ತ ಒಡೆಯರ್ ಪುತ್ಥಳಿ ನಿರ್ಮಾಣಕ್ಕೆ ಆಗ್ರಹಿಸುತ್ತಿದ್ದಾರೆ. ಇದ್ಯಾವುದನ್ನೂ ಲೆಕ್ಕಿಸದೇ ಸರ್ಕಾರ ಶ್ರೀಗಳ ಪುತ್ಥಳಿ ನಿರ್ಮಿಸಿ ಓಟ್​ಬ್ಯಾಂಕ್ ರಾಜಕೀಯ ಮಾಡಲು ಹೊರಟಿದೆ ಎಂದು ಅವುಗಳು ಆರೋಪ ಮಾಡಿವೆ.

ಆಗಸ್ಟ್ 29 ರಂದು ಸಿಎಂ ಸಿದ್ದರಾಮಯ್ಯ ಪುತ್ಥಳಿ ನಿರ್ಮಾಣಕ್ಕೆ ಶಿಲನ್ಯಾಸ ಮಾಡಲಿದ್ದಾರೆ.. ಈ ಕಾರ್ಯಕ್ರಮಕ್ಕೆ ವಿರುದ್ಧವಾಗಿ ಸಂಘಟನೆಗಳು ಪ್ರತಿಭಟನೆ ನಡೆಸಲು ಮುಂದಾಗಿವೆ. ಒಟ್ಟಿನಲ್ಲಿ ಪುತ್ಥಳಿ ಪಾಲಿಟಿಕ್ಸ್  ಇನ್ನೊಂದು ರೂಪ ಪಡೆಯುವ ಲಕ್ಷಣ ಗೋಚರಿಸುತ್ತಿರೋದಂತೂ ಸತ್ಯ.

ವರದಿ: ಮಧು.ಎಂ.ಚಿನಕುರಳಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

14 ವರ್ಷಗಳಲ್ಲಿ ಭಾರತೀಯ ಪೌರತ್ವ ತ್ಯಜಿಸಿದವರ ಸಂಖ್ಯೆ ಎಷ್ಟು? ಈ ವಲಸೆಗೆ ಏನು ಕಾರಣ?
ಚೈತ್ರಾ ಕುಂದಾಪುರಗೆ ಮತ್ತೊಮ್ಮೆ ಕಾನೂನು ಸಂಕಷ್ಟ; ಅಪ್ಪನ ವಿಚಾರಕ್ಕೆ ಬಿಗ್ ಬಾಸ್ ಮನೆಯಿಂದ ಹೊರ ಬರ್ತಾರಾ?