ಬೆಂಗಳೂರಲ್ಲಿ ಸ್ಟೀಲ್​ ಬ್ರಿಡ್ಜ್​ ನಿರ್ಮಾಣಕ್ಕೆ ವಿರೋಧ : ಬೃಹತ್ ಪ್ರತಿಭಟನೆ

Published : Oct 16, 2016, 05:39 AM ISTUpdated : Apr 11, 2018, 12:41 PM IST
ಬೆಂಗಳೂರಲ್ಲಿ ಸ್ಟೀಲ್​ ಬ್ರಿಡ್ಜ್​ ನಿರ್ಮಾಣಕ್ಕೆ ವಿರೋಧ : ಬೃಹತ್ ಪ್ರತಿಭಟನೆ

ಸಾರಾಂಶ

ನಮ್ಮ ಬೆಂಗಳೂರು ಫೌಂಡೇಷನ್  ನೇತೃತ್ವದಲ್ಲಿ ಬಸವೇಶ್ವರ ವೃತ್ತದಿಂದ ಹೆಬ್ಬಾಳದವರೆಗೂ 4 ಕಡೆ ಪ್ರತಿಭಟನೆ ನಡೆಯುತ್ತಿದೆ. 

ಬೆಂಗಳೂರು(ಅ.16): ಬಿಡಿಎ ಕೈಗೆತ್ತಿಗೊಂಡಿರುವ ಸ್ಟೀಲ್ ಬ್ರಿಡ್ಜ್ ನಿರ್ಮಾಣಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ನಗರದ ದ ಚಾಲುಕ್ಯ ವೃತ್ತದಲ್ಲಿ ಸ್ಟೀಲ್​ ಬ್ರಿಡ್ಜ್​ ನಿರ್ಮಾಣಕ್ಕೆ ವಿರೋಧಿಸಿ ಸಾರ್ವಜನಿಕರಿಂದ ಬೃಹತ್ ಪ್ರತಿಭಟನೆ ನಡೆಯುತ್ತಿದೆ.

ನಮ್ಮ ಬೆಂಗಳೂರು ಫೌಂಡೇಷನ್  ನೇತೃತ್ವದಲ್ಲಿ ಬಸವೇಶ್ವರ ವೃತ್ತದಿಂದ ಹೆಬ್ಬಾಳದವರೆಗೂ 4 ಕಡೆ ಪ್ರತಿಭಟನೆ ನಡೆಯುತ್ತಿದೆ. 

ಧರಣಿಯಲ್ಲಿ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್​​ ಹೆಗ್ಡೆ, ‌ ನಮ್ಮ ಬೆಂಗಳೂರು ಫೌಂಡೇಷನ್​ ಕಾರ್ಯಕರ್ತರು, ಕಲಾವಿದ ಪ್ರಕಾಶ ಬೆಳವಾಡಿ, ಹಲವು ಪರಿಸರವಾದಿಗಳು ಭಾಗಿಯಾಗಿದ್ದಾರೆ. 

ಸ್ಟೀಲ್​ ಬ್ರಿಡ್ಜ್​ ನಿರ್ಮಾಣಕ್ಕಾಗಿ ನಗರದ ನೂರಾರು ಮರ ನಾಶವಾಗುತ್ತಿವೆ.  ಯೋಜನೆಯಲ್ಲಿ ಪಾರದರ್ಶಕತೆ ಕಂಡು ಬರುತ್ತಿಲ್ಲ ಎಂಬುದು ಪರಿಸರವಾದಿಗಳ ಆರೋಪವಾಗಿದೆ. 

ಸ್ಟೀಲ್​ ಬ್ರಿಡ್ಜ್​ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬೆಂಗಳೂರಲ್ಲಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಹೇಳಿಕೆ ನೀಡಿದ್ದು, ನಮ್ಮ ಸಂಸ್ಕೃತಿ ಹಾಳು ಮಾಡಲು ಸರ್ಕಾರ ಮುಂದಾಗಿದೆ  ಎಂದಿದ್ದಾರೆ. 

ಬೆಂಗಳೂರು ನಗರ ಬೆಂಗಳೂರು ನಾಗರಿಕರ ಸ್ವತ್ತ ಆಗಿದ್ದು, ಜನಾಭಿಪ್ರಾಯ ಪಡೆಯದೆ ಸರ್ಕಾರ ಯೋಜನೆಗೆ ಕೈಹಾಕುತ್ತಿದೆ ಎಂದಿರುವ  ಅವರು, ಬಿಲ್ಡರ್ಸ್, ಟಿಂಬರ್ ಮಾಫಿಯಾಗೆ ಸರ್ಕಾರ ನೆರವಾಗುತ್ತಿದೆ, ಸರ್ಕಾರ ವಿದೇಶಿ ಸಂಸ್ಕೃತಿಯನ್ನು ತರಲು ಹೊರಟಿದೆ . ಕೂಡಲೇ ಉಕ್ಕಿನ ಸೇತುವೆ ಯೋಜನೆಯನ್ನು ಕೈಬಿಡಬೇಕು ಎಂದು ರಾಜೀವ್ ಚಂದ್ರಶೇಖರ್ ಆಗ್ರಹಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಸವರ್ಷದ ಮೊದಲ ದಿನವೇ ಭಾರತದಲ್ಲಿ ಸ್ಫೋಟ, ಪ್ರವಾಸಿಗರ ಗುರಿಯಾಗಿಸಿ ನಡೆಯಿತಾ ದಾಳಿ?
ದೇಶದ ಅತ್ಯಂತ ಕ್ಲೀನ್‌ ಸಿಟಿಯಲ್ಲಿ ಮಲಿನ ನೀರಿನಿಂದಾಗಿ 6 ತಿಂಗಳ ಮಗು ಸಾವು