
ಬೆಂಗಳೂರು: ಕೇಂದ್ರ ಸರ್ಕಾರದ 2001ರ ಸೆಂಟ್ರಲ್ ಮೋಟರ್ ವೆಹಿಕಲ್ ಆ್ಯಕ್ಟ್ ಅನ್ವಯ ಹೈ ಸೆಕ್ಯೂರಿಟಿ ರಿಜಿಸ್ಟ್ರೇಶನ್ ಪ್ಲೇಟ್ (ಎಚ್ಎಸ್ಆರ್ಪಿ) ಅಳವಡಿಸಬೇಕೆಂಬ ನಿಯಮವನ್ನು ರಾಜ್ಯದಲ್ಲಿ ಶೀಘ್ರ ಜಾರಿಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಈ ಸಂಬಂಧ ಅಧಿಕಾರಿಗಳ ಸಭೆ ನಡೆಸಿದ ಸಾರಿಗೆ ಸಚಿವ ಎಚ್.ಎಂ. ರೇವಣ್ಣ, ವಾಹನಗಳ ಮೇಲೆ ಸೂಕ್ತ ನಿಗಾ ಇಡಲು ಹೊಸ ನಂಬರ್ ಪ್ಲೇಟ್ ಅಳವಡಿಕೆಗೆ ಸೂಕ್ತ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಹೀಗಾಗಿ ಒಂದು ವಾರದೊಳಗೆ ಎಲ್ಲ ಬಗೆಯ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಅಳವಡಿಸುವ ಕುರಿತಂತೆ ಆದೇಶ ಹೊರಬೀಳುವ ನಿರೀಕ್ಷೆ ಇದೆ.
2009ರಲ್ಲೇ ಈ ಕಾಯ್ದೆ ಜಾರಿಗೆ ಬಂದಿದ್ದರೂ ರಾಜ್ಯದಲ್ಲಿ ಈ ನಿಯಮವನ್ನು ಗಂಭೀರವಾಗಿ ಅನುಷ್ಠಾನಗೊಳಿಸಿರಲಿಲ್ಲ. ಹೊಸ ನಂಬರ್ ಪ್ಲೇಟ್ ದುಬಾರಿಯಾಗಿದ್ದು, ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.