
ಬೆಂಗಳೂರು(ಜೂ.27): ಕಾನೂನು ಬಾಹಿರವಾಗಿ ಆರ್ಡರ್ಲಿಗಳನ್ನು ನೇಮಿಸಿಕೊಂಡಿರುವ ಪೊಲೀಸ್ ಅಧಿಕಾರಿಗಳ ವಿರುದ್ದ ದೂರು ಸಲ್ಲಿಕೆಯಾಗಿದೆ. ರಾಜ್ಯ ಪೊಲೀಸ್ ಪ್ರಾಧಿಕಾರಕ್ಕೆ ವಕೀಲರಾದ ಸುಧಾ ಕಟವಾ, ವಕೀಲ ಉಮಾಪತಿ ಕಂಪ್ಲೇಂಟ್ ನೀಡಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳು ಪೊಲೀಸ್ ಪೇದೆಗಳನ್ನು ಜೀತದಾಳುಗಳ ರೀತಿ ಮನೆಕೆಲಸಗಳಿಗೆ ಬಳಸಿಕೊಳ್ಳುತ್ತಿರುವ ಬಗ್ಗೆ ಸುವರ್ಣನ್ಯೂಸ್ ವರದಿ ಮಾಡಿತ್ತು. ಆರ್ಡರ್ಲಿ ಪದ್ದತಿಯನ್ನು ರದ್ದುಗೊಳಿಸಿದ್ದರೂ ನಿಯಮ ಉಲ್ಲಂಘಿಸಿರುವ ಬಗ್ಗೆ ದಾಖಲೆ ಸಮೇತ ಮಾಹಿತಿ ನೀಡಿತ್ತು. ಇದೇ ಆಧಾರದಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಎಡಿಜಿಪಿ, ಐಜಿಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಲಾಗಿದೆ. 51 ಐಪಿಎಸ್ ಅಧಿಕಾರಿಗಳು ಸೇರಿ 81 ಅಧಿಕಾರಿಗಳು ಆರ್ಡಲಿಗಳ ನೇಮಕ ಮಾಡಿಕೊಂಡಿದ್ದಾರೆ ಅಂತ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇತ್ತೀಚಿಗಷ್ಟೆ ಆರ್ಡರ್ಲಿ ವ್ಯವಸ್ಥೆಯನ್ನು ರದ್ದಿಗೊಳಿಸಿದ್ದ ಸರ್ಕಾರ ಸಿಬ್ಬಂದಿಯ ಸ್ಥಳದಲ್ಲಿ ಖಾಸಗಿ ಅನುಯಾಯಿಗಳನ್ನು ನೇಮಿಸಿಕೊಳ್ಳುವಂತೆ ನಿರ್ದೇಶಿಸಿತ್ತು. ಜೊತೆಗೆ ಭತ್ಯೆ ರೂಪದಲ್ಲಿ ಹಣ ಪಾವತಿ ಮಾಡುವುದಾಗಿ ಗೃಹ ಇಲಾಖೆ ಕೂಡ ಆದೇಶ ಹೊರಡಿಸಿತ್ತು. ನಿಷೇಧ ಮಾಡುವ ಮೊದಲು ಬೆಂಗಳೂರೊಂದರಲ್ಲೇ ವಿವಿಧ ದರ್ಜೆ ಅಧಿಕಾರಿಗಳ ಮನೆಗಳಲ್ಲಿ 1239 ಮಂದಿ ಸಿಎಆರ್ ಸಿಬ್ಬಂದಿ ಆರ್ಡರ್ಲಿ ಅಡಿಯಲ್ಲಿ ಕೆಲಸ ಮಾಡುತ್ತಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.